ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ 
ರಾಜ್ಯ

ಕೆಲಸಕ್ಕೆ ತೆರಳುತ್ತಿದ್ದ ಯುವತಿಯ ತುಟ್ಟಿ ಕಚ್ಚಿದ ಕಾಮುಕ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹೊಸ ವರ್ಷಾಚರಣೆ ವೇಳೆ ಎಂಜಿ ರಸ್ತೆ ಮತ್ತು ಕಮ್ಮನ ಹಳ್ಳಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಚರ್ಚೆಗೀಡಾಗಿರುವಂತೆಯೇ ಅಂತಹುದೇ ಮತ್ತೊಂದು ಪ್ರಕರಣ ಕೆಜಿ ಹಳ್ಳಿಯಲ್ಲಿ ವರದಿಯಾಗಿದೆ.

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಎಂಜಿರಸ್ತೆ ಮತ್ತು ಕಮ್ಮನ ಹಳ್ಳಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಚರ್ಚೆಗೀಡಾಗಿರುವಂತೆಯೇ ಅಂತಹುದೇ ಮತ್ತೊಂದು ಪ್ರಕರಣ ಕೆಜಿ ಹಳ್ಳಿಯಲ್ಲಿ ವರದಿಯಾಗಿದೆ.

ಕೆಲಸಕ್ಕೆಂದು ಮುಂಜಾನೆ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ ಯುವತಿಯೋರ್ವಳ ಮೇಲೆ ಕಾಮುನೋರ್ವ ಎರಗಿದ್ದು, ಆಕೆಯನ್ನು ಬಲವಂತವಾಗಿ ಚುಂಬಿಸಿ ಬಳಿಕ ಆಕೆಯ ತುಟಿ ಮತ್ತು ನಾಲಗೆಯನ್ನು ಕಚ್ಚಿ ಪರಾರಿಯಾಗಿದ್ದಾನೆ.  ಶುಕ್ರವಾರ ಬೆಳಗ್ಗೆ ಸುಮಾರು 6.30ರ ಸಂದರ್ಭದಲ್ಲಿ ಕಾಡುಗೊಂಡನಹಳ್ಳಿಯಲ್ಲಿ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ ಯುವತಿಯನ್ನು ಹಿಂಬಾಲಿಸಿದ ದುಷ್ಕರ್ಮಿ ಯಾರೂ ಇಲ್ಲದ ಸಂದರ್ಭವನ್ನು ನೋಡಿ ಆಕೆಗೆ ಚುಂಬಿಸಿ ತುಟಿ ಕಚ್ಚಿದ್ದಾನೆ.  ಈ ವೇಳೆ ಯುವತಿ ಕಿರುಚಿಕೊಂಡಿದ್ದು, ಯುವತಿ ಕಿರುಚಾಡುತ್ತಿದ್ದಂತೆಯೇ ಅಲ್ಲಿದ್ದ ನಾಯಿಗಳು ಬೊಗಳಲು ಆರಂಭಿಸಿವೆ. ಈ ಸಂದರ್ಭದಲ್ಲಿ ಅಕ್ಕಪಕ್ಕದ ಮನೆಗಳಲ್ಲಿ ನಿದ್ರಿಸುತ್ತಿದ್ದ ಮಂದಿ ಎದ್ದು ಹೊರಗೆ ಬರುತ್ತಿದ್ದಂತೆಯೇ ದುಷ್ಕರ್ಮಿ  ಪರಾರಿಯಾಗಿದ್ದಾನೆ.

ಮೂಲಗಳ ಪ್ರಕಾರ ಸಂತ್ರಸ್ತಸ್ತೆ ವಿನೋಬಾನಗರ ನಿವಾಸಿ ಎಂದು ತಿಳಿದುಬಂದಿದ್ದು, ಕೋರಮಂಗಲದಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾಳೆ. ಶುಕ್ರವಾರ ಬೆಳಗಿನ ಪಾಳಿಯ ಕೆಲಸವಿದ್ದರಿಂದ ಅಂದು ಆಕೆ ಮುಂಜಾನೆ  ಬಸ್'ಗಾಗಿ ಗೋವಿಂದಪುರ ರಸ್ತೆಯಲ್ಲಿ ತೆರಳುತ್ತಿದ್ದಳು. ಈ ವೇಳೆ ಆಕೆ ಒಂಟಿಯಾಗಿರುವುದನ್ನು ಗಮನಿಸಿದ ದುಷ್ಕರ್ಮಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ. ಕೆಜಿ ಹಳ್ಳಿಯ ನಿರ್ಜನ ರಸ್ತೆಯಲ್ಲಿ ಆಕೆಯ ಮೇಲೆ  ದೌರ್ಜನ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಸ್ತುತ ಘಟನೆ ಸಂಬಂಧ ಕೆಜಿ ಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 354 (ಮಹಿಳೆ ಗೌರವಕ್ಕೆ ಧಕ್ಕೆ), 509 (ಅಶ್ಲೀಲ ಪದ ಬಳಕೆ ಅಥವಾ ಅಶ್ಲೀಲ ಸಂಜ್ಞೆ) ಅಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಂತೆಯೇ  ಸ್ಥಳದಲ್ಲಿರುವ ಎಲ್ಲ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಜಿ ಪರಮೇಶ್ವರ ಅವರು, ಘಟನೆ ತಮ್ಮ ಗಮನಕ್ಕೆ ಬಂದಿದೆ. ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಿ ವರದಿ ಪಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಮೊದಲೇ ಕಾಯುತ್ತಿದ್ದ ದುಷ್ಕರ್ಮಿ
ಇನ್ನು ಸಂತ್ರಸ್ತ ಯುವತಿ ಈ ಮಾರ್ಗವಾಗಿಯೇ ಕೋರಮಂಗಲಕ್ಕೆ ಪ್ರತಿನಿತ್ಯ ತೆರಳುತ್ತಿದ್ದಳು. ಇದನ್ನು ಗಮನಿಸಿದ್ದ ದುಷ್ಕರ್ಮಿ ಆಕೆ ಬರುವಿಕೆಯನ್ನೇ ಕಾಯುತ್ತಿದ್ದ. ಅಲ್ಲದೆ ಆಕೆ ಆಗಮಿಸುವ ಮೊದಲೇ ಆ ರಸ್ತೆಗೆ ಆಗಮಿಸಿ  ಕಾಯುತ್ತಿದ್ದ ದೃಶ್ಯಾವಳಿಗಳು ಸ್ಥಳೀಯ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT