ವಿವೇಕ್ ಶೆಟ್ಟಿ 
ರಾಜ್ಯ

ಶಾಸಕ ರಾಜು ಕಾಗೆ ಸಂಬಂಧಿಕರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; 13 ಮಂದಿ ವಿರುದ್ಧ ಕೇಸ್

ಬೆಳಗಾವಿ ಜಿಲ್ಲೆ ಕಾಗವಾಡ ಬಿಜೆಪಿ ಶಾಸಕ ರಾಜು ಕಾಗೆ ಅವರ ಮಗಳ ವಿರುದ್ಧ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಕಾಮೆಂಟ್...

ಬೆಳಗಾವಿ: ಬೆಳಗಾವಿ ಜಿಲ್ಲೆ ಕಾಗವಾಡ ಬಿಜೆಪಿ ಶಾಸಕ ರಾಜು ಕಾಗೆ ಅವರ ಮಗಳ ವಿರುದ್ಧ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಕಾಮೆಂಟ್ ಪೋಸ್ಟ್ ಮಾಡಿದ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಗೆ ಸಹೋದರ ಸೇರಿದಂತೆ 11 ಮಂದಿ ಸಂಬಂಧಿಕರು ವಿವೇಕ್ ಶೆಟ್ಟಿ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 
ಈ ಸಂಬಂಧ ಸೋಮವಾರ ಕಾಗವಾಡ ಠಾಣೆ ಪೊಲೀಸರು ಶಾಸಕ ರಾಜು ಕಾಗೆ ಹಾಗೂ ಅವರ ಸೋದ ರಸಿದ್ದಗೌಡ ಕಾಗೆ ಮತ್ತು ಮಗಳು ಸೇರಿದಂತೆ 13 ಮಂದಿ ವಿರುದ್ಧ ಗೂಂಡಾ ಕಾಯ್ಡೆಯಡಿ ಕೇಸ್ ದಾಖಲಿಸಿದ್ದಾರೆ.
ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಕಾಮೆಂಟ್ ಪೋಸ್ಟ್ ಮಾಡಿದ ಎನ್ನುವ ಕಾರಣಕ್ಕ ಶಾಸಕರ ಸಂಬಂಧಿಗಳು ಉಗಾರದ ಯುವಕನ ಮನೆಗೆ ನುಗ್ಗಿ ಕೈಗೆ ಸಿಕ್ಕ ವಸ್ತುಗಳಿಂದ ಹೊಡೆದು, ಮೆಟ್ಟಿಲುಗಳ ಮೆಲೆ ಎಳೆದೊಯ್ದು ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ವಿವೇಕ್ ಅವರ ತಾಯಿ ಉಜ್ವಾಲ ಶೆಟ್ಟಿ ಅವರ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಜನವರಿ 1ರಂದು ಈ ಘಟನೆ ನಡೆದಿದ್ದು, ವಿವೇಕ್ ಶೆಟ್ಟಿ ಹಾಗೂ ತಾಯಿ ಮೀರಜ್ ನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿವೇಕ್ ಶೆಟ್ಟಿಯನ್ನು ಮನೆಯಿಂದ ದರ, ದರ ಎಳೆತಂದು, ರಾಜು ಕಾಗೆ ಅವರ ಗೋದಾಮಿನಲ್ಲಿ ಮನಸ್ಸಿಗೆ ಬಂದಂತೆ ಥಳಿಸಿರುವುದಾಗಿ ವಿವೇಕ್ ಶೆಟ್ಟಿ ಆರೋಪಿಸಿದ್ದಾರೆ.
ಹೊಸ ವರ್ಷದ ಮೊದಲ ದಿನ ಈ ಘಟನೆ ನಡೆದಿದ್ದು, ಶಾಸಕ ರಾಜು ಕಾಗೆ ಅವರ ಗೂಂಡಾಗಿರಿಗೆ ಹೆದರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲ್ಲ ಎಂದು ವಿವೇಕ್ ಶೆಟ್ಟಿ ತಿಳಿಸಿದ್ದಾರೆ.
ವಿವೇಕ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಮಾಧ್ಯಮಗಳಲ್ಲಿ ಬೆಳಕಿಗೆ ಬರುತ್ತಿದ್ದಂತೆಯೇ ಪಿಎಸ್ಐ ಆನಂದ್ ಡೋಣಿ ಅವರು ಮೀರಜ್ ಆಸ್ಪತ್ರೆಗೆ ತೆರಳಿ ದೂರು ಪಡೆದಿದ್ದು, ರಾಜು ಕಾಗೆ ಹಾಗೂ ಕುಟುಂಬದ ವಿರುದ್ಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಗೂಂಡಾಗಿರಿ ಕಾಯ್ದೆಯಡಿ ಮೊಕದ್ದಮೆ ದಾಖಲು ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. 
ಈ ಪ್ರಕರಣದಲ್ಲಿ  ಶಾಸಕ ರಾಜು ಕಾಗೆ 12ನೇ ಆರೋಪಿ ಎಂದು ಹೆಸರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT