ಪ್ರವಾಸಿ ಭಾರತೀಯ ದಿವಸ್ ನಲ್ಲಿ ಪಾಲ್ಗೋಂಡಿದ್ದ ಗಣ್ಯರು 
ರಾಜ್ಯ

ಕೇಂದ್ರ ಸರ್ಕಾರಕ್ಕೆ ನಮ್ಮ ಹಣ ಏಕೆ ಬೇಕು? ಅನಿವಾಸಿ ಭಾರತೀಯರ ಪ್ರಶ್ನೆ

ಕೇಂದ್ರ ಸರ್ಕಾರದ ಬಳಿ ಅಗತ್ಯವಾದ ಹಣವಿದೆ, ಹೀಗಿದ್ದರೂ ನಮಾಮಿ ಗಂಗಾ ಮತ್ತು ಸ್ವಚ್ಛಭಾರತ್ ಮಿಷನ್ ಗಳಿಗೆ ಅನಿವಾಸಿ ಭಾರತೀಯರ ಹಣವನ್ನು ಸರ್ಕಾರ ...

ಬೆಂಗಳೂರು: ಕೇಂದ್ರ ಸರ್ಕಾರದ ಬಳಿ ಅಗತ್ಯವಾದ ಹಣವಿದೆ, ಹೀಗಿದ್ದರೂ ನಮಾಮಿ ಗಂಗಾ ಮತ್ತು ಸ್ವಚ್ಛಭಾರತ್ ಮಿಷನ್ ಗಳಿಗೆ ಅನಿವಾಸಿ ಭಾರತೀಯರ ಹಣವನ್ನು ಸರ್ಕಾರ ಏಕೆ ಕೇಳುತ್ತಿದೆ ಎಂದು ಬೆಂಗಳೂರು ಮೂಲದ ಎನ್ ಆರ್ ಐ ಪ್ರಶ್ನಿಸಿದ್ದಾರೆ.

ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆದ ಡೆವಲಪ್‌ಮೆಂಟ್ ಫೌಂಡೇಷನ್  ಆಫ್ ಓವರ್‌ಸೀಸ್ ಇಂಡಿಯನ್ಸ್ ಕುರಿತ ಸಂವಾದ ಗೋಷ್ಠಿಯಲ್ಲಿ. ಬೆಂಗಳೂರು ಮೂಲದ ವಿಘ್ನೇಶ್ವರ್ ಶಿಶಿರ್  ಈ ಪ್ರಶ್ನೆ ಕೇಳಿದರು.

ಗೋಷ್ಠಿಯ ಆರಂಭದಲ್ಲಿ ವಿದೇ­ಶಾಂಗ ವ್ಯವಹಾರ ಸಚಿವಾಲಯದ ಜಂಟಿ ನಿರ್ದೇಶಕಿ ವಾಣಿ ರಾವ್ ಅವರು ಐಡಿಎಫ್‌ಒಐನ ಕಾರ್ಯ ಚಟುವಟಿ­ಕೆಗಳ ಬಗ್ಗೆ ವಿವರಣೆ ನೀಡಿದರು.ದೇಶದ ಸಾಮಾಜಿಕ ಕೆಲಸಗಳಲ್ಲಿ ಅನಿವಾಸಿ ಭಾರತೀಯರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಹೇಳಿದರು.ಅನಿವಾಸಿ ಭಾರತೀಯರು ನೀಡುವ ದೇಣಿಗೆಯಿಂದ ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯಕ್ಕೆ ಸಹಾಯ ಮಾಡುತ್ತಿದ್ದೇವೆ ಎಂದು ವಿವರಿಸಿದರು.

ಈ ವೇಳೆ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಧ್ಯಾನೇಶ್ವರ ಎಂ ಮುಲೆ ನೀವು ನಿಮ್ಮ ತಾಯ್ನಾಡಿನ ಅಭಿವೃದ್ಧಿಗೆ ಹಣ ನೀಡುವುದಕ್ಕೆ ಪಾರದರ್ಶಕವಾದ ವೇದಿಕೆ ಸಿದ್ಧಪಡಿಸಿದ್ದೇವಷ್ಟೇ. ಯಾರಿಗೂ ಒತ್ತಾಯ ಮಾಡಿಲ್ಲ. ದೇಣಿಗೆ ನೀಡುವ ಹಣಕ್ಕೆ ಸರ್ಕಾರ ತೆರಿಗೆ ವಿನಾಯಿತಿ ನೀಡಿದೆ ಎಂದು ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT