ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಅಭಿಷೇಕ್ 
ರಾಜ್ಯ

ಚಿಕ್ಕಮಗಳೂರು: ಎಬಿವಿಪಿ ಕಾರ್ಯಕರ್ತ ಅಭಿಷೇಕ್ ಆತ್ಮಹತ್ಯೆ

ಚಿಕ್ಕಮಗಳೂರಿನ ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ವಿದ್ಯಾರ್ಥಿ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಚಿಕ್ಕಮಗಳೂರು: ಚಿಕ್ಕಮಗಳೂರಿನ ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ವಿದ್ಯಾರ್ಥಿ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ವಿದ್ಯಾರ್ಥಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಲ್ಲಿ ಸಕ್ರಿಯರಾಗಿದ್ದು, ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿದಂತೆ ಉಂಟಾದ ಘರ್ಷಣೆ ಬೆಳವಣಿಗೆಯಿಂದ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. 
ಪ್ರಥಮ ದರ್ಜೆ ಕಾಲೇಜಿನಲ್ಲಿ ಜ.7 ರಂದು ಎನ್ಎಸ್ಎಸ್ ಹಾಗೂ ಎಬಿವಿಪಿ ವತಿಯಿಂದ ಗಡಿಯಲ್ಲಿ ಹುತಾತ್ಮರಾದ ಯೋಧರ ಕುರಿತಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೆ ಕಾರ್ಯಕ್ರಮಕ್ಕೆ ಎನ್ಎಸ್ ಯುಐ ವಿದ್ಯಾರ್ಥಿ ಸಂಘಟನೆ ಅಡ್ಡಿ ಪಡಿಸಿದ್ದು, ಕಾರ್ಯಕ್ರಮ ಮಾಡದಂತೆ ಆಯೋಜಕರಿಗೆ ಎಚ್ಚರಿಕೆ ನೀಡಿದ್ದೂ ಅಲ್ಲದೇ ಹಲ್ಲೆ ಮಾಡಿದ್ದಾರೆ ಎಂದು ಎಬಿವಿಪಿ ಸಂಘಟನೆ ಆರೋಪಿಸಿದೆ. 
ವಿದ್ಯಾರ್ಥಿ ಅಭಿಷೇಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಎಬಿವಿಪಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ನೇರ ಆರೋಪ ಮಾಡಿದ್ದು, ರಾಜ್ಯ ಸರ್ಕಾರ ತನ್ನ ಪ್ರಭಾವವನ್ನು ಬಳಸಿ ಎಬಿವಿಪಿ ಕಾರ್ಯಕರ್ತರ ಮೇಲೆ ಕೇಸು ದಾಖಲಿಸಿದ್ದಾರೆ. ಇದರಿಂದ ಖಿನ್ನತೆಗೆ ಒಳಗಾಗಿ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದು ಜ.11 ಹಾಗೂ 12 ರಂದು ಪ್ರತಿಭಟನೆ ಹೋರಾಟಕ್ಕೆ ಮಾಡುವುದಾಗಿ ಎಬಿವಿಪಿ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT