ಈ ಹಿಂದಿನ ವರ್ಷಗಳಲ್ಲಿ ದೇವಾಲಯದ ಶಿವಲಿಂಗಕ್ಕೆ ಸೂರ್ಯರಶ್ಮಿ ಬಿದ್ದಾಗಿನ ಸಂದರ್ಭದ ಚಿತ್ರ 
ರಾಜ್ಯ

ಸೂರ್ಯರಶ್ಮಿ ಪ್ರವೇಶದ ವಿಸ್ಮಯ ಘಳಿಗೆಗೆ ಸಾಕ್ಷಿಯಾದ ಗವಿ ಗಂಗಾಧರೇಶ್ವರ

ಇಲ್ಲಿನ ಪ್ರಖ್ಯಾತ ಗವಿ ಗಂಗಾಧರೇಶ್ವರ ದೇವಾಲಯದ ಬಲಭಾಗ ಕಿಂಡಿಯಿಂದ...

ಬೆಂಗಳೂರು: ಇಲ್ಲಿನ ಪ್ರಖ್ಯಾತ ಗವಿ ಗಂಗಾಧರೇಶ್ವರ ದೇವಾಲಯದ ಬಲಭಾಗ ಕಿಂಡಿಯಿಂದ ಸೂರ್ಯರಶ್ಮಿ ಪ್ರವೇಶಿಸಿ ಶಿವಲಿಂಗದ ಪಾದವನ್ನು ಸ್ಪರ್ಶಿಸಿತು. ಇಂದು ಸಂಜೆ 5.19ಕ್ಕೆ ಸೂರ್ಯರಶ್ಮಿ ನಂದಿಯ ಕೊಂಬಿನ ಸುತ್ತ ಹರಿದು ಶಿವಲಿಂಗದ ಪಾದವನ್ನು ಸ್ಪರ್ಶಿಸಿದೆ. ಶಿವಲಿಂಗಕ್ಕೆ ಹೆಚ್ಚಿನ ಶಾಖ ಉಂಟಾಗಬಾರದೆಂದು ಅರ್ಚಕರು ಹಾಲಿನ ಅಭಿಷೇಕ ನೆರವೇರಿಸಿದರು.  ಈ ವಿಸ್ಮಯಕಾರಿ ಘಳಿಗೆಗೆ ಸಾವಿರಾರು ಭಕ್ತರು ಸಾಕ್ಷಿಯಾದರು.
ಮಕರ ಸಂಕ್ರಮಣದ ದಿನ ಸೂರ್ಯ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ತನ್ನ ಪಥವನ್ನು ಬದಲಿಸುತ್ತಾನೆ. ಈ ಸಂದರ್ಭದಲ್ಲಿ ಸಂಪೂರ್ಣ ಸೂರ್ಯನ ಬೆಳಕನ್ನು ಭಕ್ತರು ಸವಿಯುವುದಕ್ಕೋಸ್ಕರ ಈ ಸಂದರ್ಭದಲ್ಲಿ ಶಿವಲಿಂಗಕ್ಕೆ ಯಾವುದೇ ಅಲಂಕಾರ ಮಾಡುವುದಿಲ್ಲ. ದೇವಾಲಯದ ಹೊರಗೆ ಪರದೆಗಳಲ್ಲಿ ಸೂರ್ಯರಶ್ಮಿ ಬೀಳುವುದರ ನೇರ ಪ್ರಸಾರದ ವ್ಯವಸ್ಥೆ ಮಾಡಿರುತ್ತಾರೆ.  ವರ್ಷಕ್ಕೆ ಒಂದೇ ಒಂದು ದಿನ ಮಕರ ಸಂಕ್ರಾಂತಿಯಂದು ನಡೆಯುವ  ಅತ್ಯಂತ ಕೌತುಕದ ಘಳಿಗೆಯಿದು. 
ಗವಿಗಂಗಾಧರೇಶ್ವರ ದೇವಾಲಯದಲ್ಲಿ ಇಂದು ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಅಭಿಷೇಕ ನಡೆಯುತ್ತಲೇ ಸಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ; 26 ತಿಂಗಳ ಅರಿಯರ್ಸ್; ವೇತನ ಪರಿಷ್ಕರಣೆಗೆ ಒಪ್ಪಿಗೆ; ರದ್ದಾಗುತ್ತಾ ಮುಷ್ಕರ?

T20 World Cup 2026: ನೆದರ್ಲೆಂಡ್ ವಿರುದ್ಧ 17 ರನ್ ಗಳಿಂದ ಗೆದ್ದು, ಟಿ-20 ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ!

ಬಾಂಗ್ಲಾ ಪ್ರಧಾನಿಯಾದ ಬೆನ್ನಲ್ಲೇ ದೇಶಾದ್ಯಂತ ಅಪಹಾಸ್ಯಕ್ಕೆ ಗುರಿಯಾದ Tarique Rahman; ಆಯ್ಕೆ ಮಾಡಿದ ಜನರಿಂದಲೇ ಅವಮಾನ, ಆರೋಪ?

ಪಂಜಾಬ್: ಬಟಿಂಡಾದಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ, ಅಶ್ರುವಾಯು ಪ್ರಯೋಗ!

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್-ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ! Video

SCROLL FOR NEXT