ಸಂಗ್ರಹ ಚಿತ್ರ 
ರಾಜ್ಯ

ಕಾವೇರಿಯಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಸಾವು!

ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳು ಕಾವೇರಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು: ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳು ಕಾವೇರಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಬೆಂಗಳೂರು ಮೂಲದ ಸುಮಾರು 54 ವಿದ್ಯಾರ್ಥಿಗಳ ತಂಡವೊಂದು ಶಿವನಸಮುದ್ರ ಗಗನ ಚುಕ್ಕಿ, ಭರಚುಕ್ಕಿ ಜಲಪಾತಕ್ಕೆ ಪ್ರವಾಸಕ್ಕೆಂದು ಆಗಮಸಿದ್ದವು. ಈ ವೇಳೆ ಈಜಲೆಂದು ನೀರಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು  ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳನ್ನು 20 ವರ್ಷದ ಶ್ರೀನಿವಾಸ್, 21 ವರ್ಷದ ದೇವರಾಜು ಎಂದು ಗುರುತಿಸಲಾಗಿದೆ. ನೀರಿನಲ್ಲಿ ಅಪಾಯಕ್ಕೆ ಸಿಲುಕಿದ್ದ ಮೂರನೇ ವಿದ್ಯಾರ್ಥಿ ಮಹಾದೇವ್ ಎಂಬಾತನನ್ನು ರಕ್ಷಿಸಲಾಗಿದ್ದು,  ಆತನನ್ನು ಕೆಆರ್ ಪೇಟೆಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರಿನ ಬಿಷಪ್ ಕಾಟನ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಶುಕ್ರವಾರ ಪ್ರವಾಸಕ್ಕೆಂದು ಶಿವನಸಮುದ್ರ ಗಗನ ಚುಕ್ಕಿ, ಭರಚುಕ್ಕಿ ತೆರಳಿತ್ತು. ಜಲ ಕ್ರೀಡೆ ಬಳಿಕ ವೆಸೆಲ್ಲೇ ಸೇತುವೆ ಬಳಿ ವಿದ್ಯಾರ್ಥಿಗಳು ಊಟ ಮಾಡಿದ್ದು, ಬಳಿಕ  ನದಿಯಲ್ಲಿ ಈಜಲು ತೆರಳಿದ್ದಾರೆ. ಈ ವೇಳೆ ದುರಂತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತ ಶ್ರೀನಿವಾಸ್ ಹಾಗೂ ದೇವರಾಜ್ ಇಬ್ಬರಿಗೂ ಈಜು ಬರುತ್ತಿರಲಿಲ್ಲ ಎಂದು ಸ್ನೇಹಿತರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT