ಚಿತ್ರಸಂತೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಸಾವಿರಾರು ಕಲಾ ಪ್ರೇಮಿಗಳ ಆಕರ್ಷಿಸಿದ ಚಿತ್ರಸಂತೆ!

ಭಾನುವಾರ ಬೆಂಗಳೂರಿನ ಕುಮಾರ ಕೃಪಾ ರಸ್ತೆ ಕಲಾ ರಸಿಕರಿಂದ ತುಂಬಿ ತುಳುಕುತ್ತಿತ್ತು. ಸಾವಿರಾರು ಚಿತ್ರ ಪ್ರೇಮಿಗಳು ವಿವಿಧ ಕಲಾವಿದರು ರಚಿಸಿದ್ದ ವಿವಿಧ ಕಲಾಕೃತಿಗಳನ್ನು ಕೊಂಡರೆ, ಮತ್ತೆ ಕೆಲವರು ಅವುಗಳ ಸೌಂದರ್ಯವನ್ನು ನೋಡಿಯೇ ಆಸ್ವಾಧಿಸಿದರು.

ಬೆಂಗಳೂರು: ಭಾನುವಾರ ಬೆಂಗಳೂರಿನ ಕುಮಾರ ಕೃಪಾ ರಸ್ತೆ ಕಲಾ ರಸಿಕರಿಂದ ತುಂಬಿ ತುಳುಕುತ್ತಿತ್ತು. ಸಾವಿರಾರು ಚಿತ್ರ ಪ್ರೇಮಿಗಳು ವಿವಿಧ ಕಲಾವಿದರು ರಚಿಸಿದ್ದ ವಿವಿಧ ಕಲಾಕೃತಿಗಳನ್ನು ಕೊಂಡರೆ, ಮತ್ತೆ ಕೆಲವರು ಅವುಗಳ  ಸೌಂದರ್ಯವನ್ನು ನೋಡಿಯೇ ಆಸ್ವಾಧಿಸಿದರು.

ಇದಕ್ಕೆಲ್ಲಾ ವೇದಿಕೆ ಕಲ್ಪಿಸಿದ್ದು ಚಿತ್ರಕಲಾ ಪರಿಷತ್. ಪ್ರತೀ ವರ್ಷದಂತೆ ಈ ಬಾರಿಯೂ ಚಿತ್ರಕಲಾ ಪರಿಷತ್ ವತಿಯಿಂದ ಇಂದು ಚಿತ್ರಸಂತೆ ನಡೆಯಿತು. ದೇಶದ 16 ರಾಜ್ಯಗಳಿಂದ ಆಗಮಿಸಿದ್ದ ಸುಮಾರು 1400 ಕಲಾವಿದರು  ರಚಿಸಿದ್ದ ಸುಮಾರು 80 ಸಾವಿರ ಕಲಾಕೃತಿಗಳು ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್ ಆವರಣ ಹಾಗೂ ರಸ್ತೆಗಳಲ್ಲಿ ಪ್ರದರ್ಶನಗೊಂಡವು. ಕೇವಲ ಪ್ರದರ್ಶನ ಮಾತ್ರವಲ್ಲದೇ ಮಾರಾಟಕ್ಕೂ ಅನುವು  ಮಾಡಿಕೊಟ್ಟಿದ್ದರಿಂದ ಕಲಾ ಪ್ರೇಮಿಗಳು ತಮಗಿಷ್ಟವಾದ ಕಲಾಕೃತಿಗಳನ್ನು ಖರೀದಿಸಿ ಮನೆಗೆ ಕೊಂಡೊಯ್ದರು.

ಸ್ಥಳದಲ್ಲೇ ಚಿತ್ರ ಬಿಡಿಸಿಕೊಡುವ ಕಲಾವಿದರು ಸೇರಿದಂತೆ ವರ್ಣ, ತೈಲ, ರೇಖಾಚಿತ್ರ, ಹೀಗೆ ನಾನಾ ಪ್ರಕಾರಗಳ ಕಲಾವಿದರು ಚಿತ್ರಸಂತೆಯಲ್ಲಿ ತಮ್ಮ ಕಲಾಕೌಶಲ್ಯವನ್ನು ಪ್ರದರ್ಶಿಸಿದರು. ಮಕ್ಕಳಿಂದ ಹಿಡಿದು ದೊಡ್ಡವರೆ  ಸೆಳೆಯುವ ಕೃತಿಗಳು ಅನಾವರಣಗೊಂಡಿದ್ದವು. ಚಿತ್ರ ಸಂತೆಯಲ್ಲಿ ನೂರು ರುಪಾಯಿಯಿಂದ ಹಿಡಿದು ಕೋಟಿ ರುಪಾಯಿವರೆಗೂ ಬೆಲೆಬಾಳುವ ಕೃತಿಗಳು ಕಲಾ ಪ್ರೇಮಿಗಳ ಆಕರ್ಷಿಸಿದವು. ಚಿತ್ರಕಲಾ ಪರಿಷತ್‌ನ ಒಳಗೆ  ಚಿತ್ರಸಂತೆಯ ಅಂಗವಾಗಿ ಇದೇ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.  ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಗಳವರೆಗೂ ಚಿತ್ರಸಂತೆಗೆ ಅನುವು ಮಾಡಿಕೊಡಲಾಗಿತ್ತು.

ಚಿತ್ರ ಸಂತೆ ಉದ್ಘಾಟನೆ ಮಾಡಿದ ಸಿಎಂ
ಇನ್ನು 2017ನೇ ಸಾಲಿನ ಚಿತ್ರಸಂತೆಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಬೆಳಗ್ಗೆ ಚಿತ್ರಕಲಾ ಪರಿಷತ್ ಗೆ ಆಗಮಿಸಿದ ಸಿದ್ದರಾಮಯ್ಯ ಅವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ ಬಿಳಿ  ಕಾಗದದ ಮೇಲೆ ಬರೆಯುವ ಮೂಲಕ ಚಿತ್ರಸಂತೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿವಿ ಸದಾನಂದಗೌಡ ಸೇರಿದಂತೆ ಹಲವು ರಾಜಕೀಯ ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT