ಸಾಂದರ್ಭಿಕ ಚಿತ್ರ 
ರಾಜ್ಯ

ಉತ್ತರ ಬೆಂಗಳೂರಿನತ್ತ ಬಿಬಿಎಂಪಿ ತೆರವು ಕಾರ್ಯಾಚರಣೆ, ವೈಟ್‌ಹೌಸ್‌ ಕಾಂಪೌಂಡ್‌ ನೆಲಸಮ

ಸುಮಾರು ಒಂದು ತಿಂಗಳ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ರಾಜಕಾಲುವೆ ಒತ್ತುವರಿ ತೆರವು...

ಬೆಂಗಳೂರು: ಸುಮಾರು ಒಂದು ತಿಂಗಳ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಉತ್ತರ ಬೆಂಗಳೂರಿನತ್ತ ಮುಖ ಮಾಡಿದ್ದು, ಬುಧವಾರ ಹೆಬ್ಬಾಳ, ಯಲಹಂಕ, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಆರಂಭಿಸಿದೆ.
ಇಂದು ಬೆಳಗ್ಗೆ ಆರ್‌ಟಿ ನಗರ ದಿಣ್ಣೂರು ಮುಖ್ಯರಸ್ತೆಯಲ್ಲಿರುವ ವೈಟ್‌ಹೌಸ್‌ಗೆ ಸೇರಿದ ಸುಮಾರು ಒಂಭತ್ತೂವರೆ ಗುಂಟೆ ಜಾಗದಲ್ಲಿ ನಿರ್ಮಾಣಗೊಂಡಿದ್ದ ಕಾಂಪೌಂಡ್‌ನ್ನು ಬಿಬಿಎಂಪಿ ನೆಲಸಮಗೊಳಿಸಿದೆ. ವೈಟ್‌ಹೌಸ್ ಕಟ್ಟಡ ಕಟ್ಟುವ ಸಮಯದಲ್ಲೇ ಅದರ ಮಾಲೀಕರು ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್‌ನ್ನು ನಿರ್ಮಿಸಿದ್ದರು.
ಬಫರ್ ಜೋನ್ ವಲಯವನ್ನು ಬಿಡದೆ ಕಾಂಪೌಂಡನ್ನು ನಿರ್ಮಿಸಲಾಗಿತ್ತು. ಇದರಿಂದ ಈ ಭಾಗದಲ್ಲಿ ರಾಜಕಾಲುವೆ ಇಲ್ಲದಂತಾಗಿದ್ದು, ಮಳೆ ಬಂದಾಗ ನೀರು ಸರಾಗವಾಗಿ ಹರಿಯದೆ ತೊಂದರೆ ಎದುರಾಗಿತ್ತು. ಇಂದು ಸಂಜೆಯೊಳಗೆ ಕಾಂಪೌಂಡ್‌ನ್ನು ತೆರವುಗೊಳಿಸುವ ಕಾರ್ಯಾಚರಣೆ ಪೂರ್ಣಗೊಳ್ಳಲಿದೆ. ನಂತರ ಪಟೇಲ್ ಇನ್ ಕ್ಲಬ್‌ನಲ್ಲಿ ಅಕ್ರಮವಾಗಿ ಕಟ್ಟಿಕೊಳ್ಳಲಾಗಿರುವ ಅಡುಗೆ ಮನೆ, ಸಭಾಂಗಣಗಳನ್ನು ತೆರವುಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಲಹಂಕ ವಲಯದ ಅಟ್ಟೂರು ವಾರ್ಡ್‌ನ ಗ್ರಾಮದ ಅಟ್ಟೂರು ಕೆರೆ ಕೋಡಿ ಸಮೀಪ 2,300 ಮೀಟರ್ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿದ್ದ 18 ಖಾಲಿ ಜಾಗಗಳನ್ನು ಕೂಡ ಬಿಬಿಎಂಪಿ ಕಾರ್ಯಾಚರಣೆ ಪಡೆ ತೆರವುಗೊಳಿಸಿ ತನ್ನ ವಶಕ್ಕೆ ತೆಗೆದುಕೊಂಡಿದೆ.
18 ಖಾಲಿ ಜಾಗಗಳ ಪೈಕಿ 4 ನಿವೇಶನಗಳ ಮಾಲೀಕರು ನಿವೇಶನದ ಸುರಕ್ಷತೆಗಾಗಿ ಕಾಂಪೌಂಡ್‌ಗಳನ್ನು ನಿರ್ಮಿಸಿಕೊಂಡಿದ್ದರು. ಈ ಕಾಂಪೌಂಡ್‌ಗಳನ್ನು ಇಂದು ತೆರವುಗೊಳಿಸಲಾಗುತ್ತಿದ್ದು, ನಾಳೆ ಸಂಜೆಯವರೆಗೂ ಕಾರ್ಯಾಚರಣೆ ಮುಂದುವರೆಯಲಿದೆ.
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರು ವಾರ್ಡ್‌ನ ಕೋಗಿಲು ಗ್ರಾಮದಲ್ಲಿ 2,100 ಮೀಟರ್ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದ 40 ಖಾಲಿ ಜಾಗಗಳನ್ನು ತೆರವುಗೊಳಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

77ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ತವ್ಯ ಪಥದಲ್ಲಿ ಪರೇಡ್ ಆರಂಭ

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ

ಮನೆಕೆಲಸದವಳಿಗೆ ಲೈಂಗಿಕ ಕಿರುಕುಳ; ‘ಧುರಂದರ್’ ನಟ ನದೀಮ್ ಖಾನ್ ಬಂಧನ

77ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್..!

ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಧ್ವಜಾರೋಹಣ, ಪರೇಡ್ ಆರಂಭ

SCROLL FOR NEXT