ಪ್ರತಿಭಟನೆ ನಡೆಸುತ್ತಿರುವ ದಲಿತ ಸಂಘಟನೆಗಳು 
ರಾಜ್ಯ

ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪ: ಬೆತ್ತಲಾಗಿಸಿ ದಲಿತ ಯುವಕನಿಗೆ ಥಳಿತ

ಅಪ್ರಾಪ್ತ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ದಲಿತ ಯುವಕನೊಬ್ಬನನ್ನು ಕೂಡಿ ಹಾಕಿ, ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆಯೊಂದು ಗುಬ್ಬಿಯ ಹೊರವಲಯದಲ್ಲಿ ನಡೆದಿದೆ...

ತುಮಕೂರು: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ದಲಿತ ಯುವಕನೊಬ್ಬನನ್ನು ಕೂಡಿ ಹಾಕಿ, ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆಯೊಂದು ಗುಬ್ಬಿಯ ಹೊರವಲಯದಲ್ಲಿ ನಡೆದಿದೆ.

ಗುಬ್ಬಿಯ ಹೊರ ಭಾಗದ ತೋಟದ ಮನೆಯೊಂದರಲ್ಲಿ ಯುವಕನನ್ನು ಬೆತ್ತಲೆಗೊಳಿಸಿ, ಆತನಿಗೆ ಚಪ್ಪಲಿ ಹಾರ ಹಾಕಿ ಥಳಿಸಿರುವ ಈ ಘಟನೆಯ ವಿಡಿಯೋ ವಾಟ್ಸ್ ಆ್ಯಪ್ ನಲ್ಲಿ ಹರಿದಾಡಿದ ಹಿನ್ನಲೆಯಲ್ಲಿ ಖುದ್ದು ಹುಡುಗನ ಪೋಷಕರು ನಿನ್ನೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

10 ಮಂದಿಯ ತಂಡವೊಂದು ಯುವಕನಿಗೆ ಥಳಿಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಕಂಡುಬಂದಿತ್ತು. ಪ್ರಕರಣ ಸಂಬಂಧ 10ಕ್ಕೂ ಹೆಚ್ಚು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪ್ರಕಾಶ್ ಅಲಿಯಾಸ್ ಕಡು ಪ್ರಕಾಶ್ ಆತನ ಜೊತೆಗಾರರಾದ ನಾಗರಾಜ್, ರಮೇಶ್, ರಂಗಪ್ಪ, ನಾರಾಯಣ, ಬ್ಯಾಟರಾಯಪ್ಪ ಎಂದು ಗುರ್ತಿಸಲಾಗಿದೆ. ಅಭಿಷೇಕ್ (20) ಅಪಹರಣಕ್ಕೊಳಗಾದ ಯುವಕನಾಗಿದ್ದಾನೆ.

ಬಾಲಕಿಗೆ ಕಿರುಕುಳ ನೀಡಿದ್ದಾನೆಂದು ಆರೋಪಿಸಿದ್ದ ಆರೋಪಿಗಳು ಯುವಕನನ್ನು ಕಾರಿನಲ್ಲಿ ಅಪಹರಿಸಿ ತೋಟದ ಮನೆಯೊಂದರಲ್ಲಿ ಕೂಡಿ ಹಾಕಿದ್ದಾರೆ. ನಂತರ ಆತನನ್ನು ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ರಾತ್ರಿಯಾಗುತ್ತಿದ್ದಂತೆ ಆತನಿಗೆ ಬಟ್ಟೆಯನ್ನು ನೀಡಿ ಗುಬ್ಬಿಯಿಂದ 13 ಕಿ.ಮೀ ದೂರದಲ್ಲಿರುವ ಮಲ್ಲಸಂದ್ರ ಗ್ರಾಮದ ಬಳಿ ಬಿಸಾಡಿ ಹೋಗಿದ್ದಾರೆ.

ಇನ್ನು ಈ ಕೃತ್ಯ ವಿಡಿಯೋವೊಂದು ವಾಟ್ಸ್ ಅಪ್ ನಲ್ಲಿ ಹರಿದಾಡ ತೊಡಗಿತ್ತು. ಈ ವಿಡಿಯೋ ದಲಿತ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ನಿನ್ನೆ ಗುಬ್ಬಿಯಲ್ಲಿರುವ ಪೊಲೀಸ್ ಠಾಣೆಗೆ ಮುತ್ತಿಗೆ ಹಾಗಿ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ ನಡೆಸಿದ್ದವು.

ಇದರಂತೆ ಆರೋಪಿಗಳ ವಿರುದ್ಧ ಪೊಲೀಸರು ಭಾರತೀಯ ದಂಡ ಸಂಹಿತೆ 506, 323, 340,324 ಮತ್ತು 504ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಸ್ತುತ ಆರೋಪಿಗಳು ತಲೆಮರೆಸಿಕೊಂಡಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧನಕ್ಕೊಳಪಡಿಸುವುದಾಗಿ ಪೊಲೀಸರು ಹೇಳಿದ್ದಾರೆ.

ಇನ್ನು ಥಳಿತಕ್ಕೊಳಗಾದ ಯುವಕ ಸರಕು ಸಾಗಾಣೆ ಮಾಡುವ ವಾಹನದ ಚಾಲಕನ ಮಗನಾಗಿದ್ದಾನೆ. ಬಾಲಕಿಯೊಬ್ಬಳ ಮೊಬೈಲ್ ಸಂಖ್ಯೆಯನ್ನು ತೆಗೆದುಕೊಂಡಿದ್ದ ಯುವಕ ಆಕೆಗೆ ಪ್ರತೀನಿತ್ಯ ಸಂದೇಶಗಳನ್ನು ಕಳುಹಿಸುತ್ತಿದ್ದ. ಈ ವಿಚಾರ ಬಾಲಕಿ ತಂದೆಯ ಗಮನಕ್ಕೆ ಬಂದಿತ್ತು. ಹೀಗಾಗಿ ಬಾಲಕಿಯ ತಂದೆ ಹಾಗೂ ಅವರ ಜೊತೆಗಾರರು ಯುವಕನಿಗೆ ಥಳಿಸಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT