ಬಾಲಕೃಷ್ಣ 
ರಾಜ್ಯ

ಪೊಲೀಸರಿಗೆ ಧಮ್ಕಿ: ಮಾಗಡಿ ಶಾಸಕ ಎಚ್. ಸಿ ಬಾಲಕೃಷ್ಣ ಹಾಗೂ ಬೆಂಬಲಿಗರಿಗೆ ಜಾಮೀನು

ಪೊಲೀಸರಿಗೆ ಬೆದರಿಕೆ ಹಾಗೂ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದ ಮಾಗಡಿ ಶಾಸಕ ಎಚ್. ಸಿ ಬಾಲಕೃಷ್ಣ ಅವರಿಗೆ...

ಬೆಂಗಳೂರು; ಪೊಲೀಸರಿಗೆ ಬೆದರಿಕೆ ಹಾಗೂ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದ ಮಾಗಡಿ ಶಾಸಕ ಎಚ್. ಸಿ ಬಾಲಕೃಷ್ಣ ಅವರಿಗೆ ಮಾಗಡಿ 1ನೇ ಜೆಎಂಎಫ್ ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ಪೊಲೀಸ್‌ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಹಾಗೂ ಬೆದರಿಕೆ ಹಾಕಿದ ಆರೋಪಕ್ಕೆ ಗುರಿಯಾಗಿರುವ ಬಾಲಕೃಷ್ಣ ನ್ಯಾಯಾಲಯಕ್ಕೆ ಶರಣಾದರು. ಮಧ್ಯಾಹ್ನ ಆರೋಪಿಗಳ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಧೀಶ ಕೆ.ಎಂ. ಆನಂದ್‌ ಅವರು, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

5 ದಿನಕ್ಕೆ ಒಮ್ಮೆ ಠಾಣೆಗೆ ಹಾಜರಾಗಬೇಕು. ಸಾಕ್ಷ್ಯ ನಾಶಪಡಿಸಲು ಪ್ರಯತ್ನಿಸಬಾರದು ಹಾಗೂ ತಲಾ 50 ಸಾವಿರ ಭದ್ರತೆ ಹಾಗೂ ಒಬ್ಬರ ಜಾಮೀನು ನೀಡಬೇಕು ಎಂಬ ಷರತ್ತಿನೊಂದಿಗೆ ಜಾಮೀನು ನೀಡಲಾಗಿದೆ.

ಮಾಗಡಿ ತಾಲ್ಲೂಕಿನ ಅಯ್ಯಂಡಹಳ್ಳಿಯಲ್ಲಿ  ನಡೆದಿದ್ದ ಘರ್ಷಣೆ ಪ್ರಕರಣ ಬಳಿಕ ಪೊಲೀಸರು ತಮ್ಮ ಬೆಂಬಲಿಗರ ದೂರು ದಾಖಲಿಸಿಕೊಳ್ಳಲಿಲ್ಲ. ಒಂದು ಗುಂಪು ಮತ್ತು ಪಕ್ಷಕ್ಕೆ ಸಂಬಂಧಿಸಿದವರ ಮೇಲೆ ಮಾತ್ರ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿ ಶಾಸಕ ಬಾಲಕೃಷ್ಣ ತಮ್ಮ ಬೆಂಬಲಿಗರೊಂದಿಗೆ ಬುಧವಾರ ಕುದೂರು ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.ಠಾಣೆಯ ಒಳಗೆ ಮಾತುಕತೆ ವೇಳೆ ಸಿಪಿಐ ನಂದೀಶ್‌ ವಿರುದ್ಧ ವಾಗ್ವಾದ ನಡೆಸಿದ್ದರು. ಈ ಸಂದರ್ಭ ಕೆಲವು ಆಕ್ಷೇಪಾರ್ಹ ಪದಗಳನ್ನು ಬಳಸಿ, ಬೆದರಿಕೆಯನ್ನೂ ಒಡ್ಡಿದ್ದರು. ಹೀಗಾಗಿ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ