ಸಾಂದರ್ಭಿಕ ಚಿತ್ರ 
ರಾಜ್ಯ

ಅಕ್ರಮ-ಸಕ್ರಮ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನಿರ್ಮಿಸಿರುವ ಅಕ್ರಮ ಮನೆಗಳನ್ನು ಸಕ್ರಮ ಮಾಡಿಕೊಳ್ಳಲು ನೀಡಲಾಗಿದ್ದ ಗಡುವನ್ನು ಸೋಮವಾರ ವಿಸ್ತರಿಸಲಾಗಿದೆ...

ಬೆಂಗಳೂರು: ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನಿರ್ಮಿಸಿರುವ ಅಕ್ರಮ ಮನೆಗಳನ್ನು ಸಕ್ರಮ ಮಾಡಿಕೊಳ್ಳಲು ನೀಡಲಾಗಿದ್ದ ಗಡುವನ್ನು ಸೋಮವಾರ ವಿಸ್ತರಿಸಲಾಗಿದೆ.

ಈ ಕುರಿತಂತೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು, ಅಕ್ರಮ-ಸಕ್ರಮ ಯೋಜನೆಯಡಿಯಲ್ಲಿ ಗ್ರಾಮೀಣ ಭಾಗದಲ್ಲಿ 94 ಸಿ, ನಗರ ಪ್ರದೇಶಗಳಲ್ಲಿ 94 ಸಿಸಿ ಅರ್ಜಿಗಳನ್ನು ಸಲ್ಲಿಸುವ ಕಾಲಾವಕಾಶವನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಹೇಳಿದರು.

ನಗರ ಮತ್ತು ಗ್ರಾಮೀಣ ಅಕ್ರಮ-ಸಕ್ರಮಕ್ಕೆ ಈ ಹಿಂದೆ ನಿಗದಿಪಡಿಸಿದ ಶುಲ್ಕವನ್ನು ಶೇ.50ರಷ್ಟು ಕಡಿತಗೊಳಿಸಲಾಗಿದೆ. ಪರಿಶಿಷ್ಠ ಜಾತಿ ಮತ್ತು ಪಂಗಡದವರಿಗೆ ಅರ್ಧದಷ್ಟು ಶುಲ್ಕ ವಿನಾಯಿತಿ ಇರುತ್ತದೆ. ನಗರ ಪ್ರದೇಶಗಳಲ್ಲಿನ 94 ಸಿಸಿ ಕಾಯ್ದೆ ಅನ್ವಯ ಬೆಂಗಳೂರು ಮಹಾನಗ ವ್ಯಾಪ್ತಿಯಲ್ಲಿ 20-30 ವಿಸ್ತೀರ್ಣದ ನಿವೇಶನಕ್ಕೆ ರೂ.10 ಸಾವಿರ ಬದಲು ರೂ. 5 ಸಾವಿರ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ರೂ, 2.500 ದರ ನಿಗದಿ ಮಾಡಲಾಗಿದೆ. ಅಕ್ರಮ-ಸಕ್ರಮ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ನಗರಗಳಲ್ಲಿ ಫೆಬ್ರವರಿ.27 ಹಾಗೂ ಹಳ್ಳಿಗಳಲ್ಲಿ ಫೆ.21ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT