ಆದಾಯ ತೆರಿಗೆ ದಾಳಿ ವೇಳೆ ಸಿಕ್ಕ ಅಪಾರ ಪ್ರಮಾಣದ ನಗದು 
ರಾಜ್ಯ

ಆದಾಯ ತೆರಿಗೆ ದಾಳಿ: ಕೈ ಮುಖಂಡರ ಮನೆಯಲ್ಲಿ 12.8 ಕೆಜಿ ಚಿನ್ನಾಭರಣ, 162 ಕೋಟಿ ಹಣ ಪತ್ತೆ

ಸಚಿವ ರಮೇಶ್‌ ಜಾರಕಿಹೊಳಿ, ಲಕ್ಷ್ಮೀ ಹೆಬ್ಟಾಳಕರ್‌ ಅವರ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಬರೋಬ್ಬರಿ 162.06 ಕೋಟಿ ರು. ಅಘೋಷಿತ ನಗದು, ವಿವರಗಳಿಲ್ಲದ 41 ಲಕ್ಷ ರು. ಹಣ ಮತ್ತು 12.8 ಕೆ.ಜಿ.ಚಿನ್ನಾಭರಣಗಳು..

ಬೆಂಗಳೂರು: ಕರ್ನಾಟಕದ ಸಚಿವ ರಮೇಶ್‌ ಜಾರಕಿಹೊಳಿ ಮತ್ತು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳಕರ್‌ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿ ವೇಳೆ  ಬರೋಬ್ಬರಿ 162.06 ಕೋಟಿ ರು. ಅಘೋಷಿತ ನಗದು, ವಿವರಗಳಿಲ್ಲದ 41 ಲಕ್ಷ ರು. ಹಣ ಮತ್ತು 12.8 ಕೆ.ಜಿ.ಚಿನ್ನಾಭರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಕಳೆದ ಜನವರಿ 19ರಂದು ಗೋವಾ ಮತ್ತು ಕರ್ನಾಟಕ ವಲಯದ ಆದಾಯ ತೆರಿಗೆ ಅಧಿಕಾರಿಗಳು ಸಣ್ಣ ಕೈಗಾರಿಕಾ ಸಚಿವ  ರಮೇಶ್‌ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಟಾಳ್ಕರ್‌ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ  ನಡೆಸಿದ್ದರು. ಅಲ್ಲದೆ, ಅವರ ಆಪ್ತರ ಮನೆಗಳ ಮೇಲೂ ದಾಳಿ ನಡೆಸಿದ್ದರು. ಇದೀಗ ದಾಶಿ ಕುರಿತಂತೆ ಆದಾಯ ತೆರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ದಾಳಿ ವೇಳೆ ಅಪಾರ ಪ್ರಮಾಣದ ನಗದು ಹಾಗೂ ಚಿನ್ನಾಭರಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪಕ್ಷದ ಮುಖಂಡರ ಬೆಳಗಾವಿ, ಗೋಕಾಕ್‌  ಮತ್ತು ಬೆಂಗಳೂರಿನ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿತ್ತು.

ಉಭಯ ನಾಯಕರು ತಾವು ನಡೆಸುತ್ತಿರುವ ವ್ಯವಹಾರಗಳಿಗೆ ಸಂಬಂಧಪಟ್ಟಂತೆ ಹಾಗೂ ಆದಾಯ, ಬಂಡವಾಳ ಹೂಡಿಕೆ ಮಾಡಿರುವ ಕುರಿತು ಸರಿಯಾದ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆಗೆ ನೀಡಿಲ್ಲ ಎಂಬ ವಿಚಾರ  ತಿಳಿದುಬಂದಿದೆ.  ದಾಳಿ ವೇಳೆ, 162.06 ಕೋಟಿ ರು. ಅಘೋಷಿತ ನಗದು ಪತ್ತೆಯಾಗಿದೆ. ಅಲ್ಲದೆ, 41 ಲಕ್ಷ ರು.ಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ವಿವರ ನೀಡಿಲ್ಲ. ಹೀಗಾಗಿ ಆ ಎಲ್ಲಾ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಜತೆಗೆ, 12.8  ಕೆ.ಜಿ.ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದಲ್ಲದೆ ಆಸ್ತಿ ಮತ್ತು ಇತರೆ ವಿಚಾರಗಳಿಗೆ ಸಂಬಂಧಿಸಿದ ಹಲವು ಮಹತ್ವದ ಕಡತಗಳು ಪತ್ತೆಯಾಗಿದ್ದು, ಅವುಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಪ್ರತಿಕ್ರಿಯೆಗೆ ಸಿಗದ ನಾಯಕರು
ಇದೇ ವೇಳೆ ಆದಾಯ ತೆರಿಗೆ ಇಲಾಖೆ ದಾಳಿಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಉಭಯ ನಾಯಕರು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT