ಆದಾಯ ತೆರಿಗೆ ದಾಳಿ ವೇಳೆ ಸಿಕ್ಕ ಅಪಾರ ಪ್ರಮಾಣದ ನಗದು 
ರಾಜ್ಯ

ಆದಾಯ ತೆರಿಗೆ ದಾಳಿ: ಕೈ ಮುಖಂಡರ ಮನೆಯಲ್ಲಿ 12.8 ಕೆಜಿ ಚಿನ್ನಾಭರಣ, 162 ಕೋಟಿ ಹಣ ಪತ್ತೆ

ಸಚಿವ ರಮೇಶ್‌ ಜಾರಕಿಹೊಳಿ, ಲಕ್ಷ್ಮೀ ಹೆಬ್ಟಾಳಕರ್‌ ಅವರ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಬರೋಬ್ಬರಿ 162.06 ಕೋಟಿ ರು. ಅಘೋಷಿತ ನಗದು, ವಿವರಗಳಿಲ್ಲದ 41 ಲಕ್ಷ ರು. ಹಣ ಮತ್ತು 12.8 ಕೆ.ಜಿ.ಚಿನ್ನಾಭರಣಗಳು..

ಬೆಂಗಳೂರು: ಕರ್ನಾಟಕದ ಸಚಿವ ರಮೇಶ್‌ ಜಾರಕಿಹೊಳಿ ಮತ್ತು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳಕರ್‌ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿ ವೇಳೆ  ಬರೋಬ್ಬರಿ 162.06 ಕೋಟಿ ರು. ಅಘೋಷಿತ ನಗದು, ವಿವರಗಳಿಲ್ಲದ 41 ಲಕ್ಷ ರು. ಹಣ ಮತ್ತು 12.8 ಕೆ.ಜಿ.ಚಿನ್ನಾಭರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಕಳೆದ ಜನವರಿ 19ರಂದು ಗೋವಾ ಮತ್ತು ಕರ್ನಾಟಕ ವಲಯದ ಆದಾಯ ತೆರಿಗೆ ಅಧಿಕಾರಿಗಳು ಸಣ್ಣ ಕೈಗಾರಿಕಾ ಸಚಿವ  ರಮೇಶ್‌ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಟಾಳ್ಕರ್‌ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ  ನಡೆಸಿದ್ದರು. ಅಲ್ಲದೆ, ಅವರ ಆಪ್ತರ ಮನೆಗಳ ಮೇಲೂ ದಾಳಿ ನಡೆಸಿದ್ದರು. ಇದೀಗ ದಾಶಿ ಕುರಿತಂತೆ ಆದಾಯ ತೆರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ದಾಳಿ ವೇಳೆ ಅಪಾರ ಪ್ರಮಾಣದ ನಗದು ಹಾಗೂ ಚಿನ್ನಾಭರಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪಕ್ಷದ ಮುಖಂಡರ ಬೆಳಗಾವಿ, ಗೋಕಾಕ್‌  ಮತ್ತು ಬೆಂಗಳೂರಿನ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿತ್ತು.

ಉಭಯ ನಾಯಕರು ತಾವು ನಡೆಸುತ್ತಿರುವ ವ್ಯವಹಾರಗಳಿಗೆ ಸಂಬಂಧಪಟ್ಟಂತೆ ಹಾಗೂ ಆದಾಯ, ಬಂಡವಾಳ ಹೂಡಿಕೆ ಮಾಡಿರುವ ಕುರಿತು ಸರಿಯಾದ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆಗೆ ನೀಡಿಲ್ಲ ಎಂಬ ವಿಚಾರ  ತಿಳಿದುಬಂದಿದೆ.  ದಾಳಿ ವೇಳೆ, 162.06 ಕೋಟಿ ರು. ಅಘೋಷಿತ ನಗದು ಪತ್ತೆಯಾಗಿದೆ. ಅಲ್ಲದೆ, 41 ಲಕ್ಷ ರು.ಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ವಿವರ ನೀಡಿಲ್ಲ. ಹೀಗಾಗಿ ಆ ಎಲ್ಲಾ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಜತೆಗೆ, 12.8  ಕೆ.ಜಿ.ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದಲ್ಲದೆ ಆಸ್ತಿ ಮತ್ತು ಇತರೆ ವಿಚಾರಗಳಿಗೆ ಸಂಬಂಧಿಸಿದ ಹಲವು ಮಹತ್ವದ ಕಡತಗಳು ಪತ್ತೆಯಾಗಿದ್ದು, ಅವುಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಪ್ರತಿಕ್ರಿಯೆಗೆ ಸಿಗದ ನಾಯಕರು
ಇದೇ ವೇಳೆ ಆದಾಯ ತೆರಿಗೆ ಇಲಾಖೆ ದಾಳಿಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಉಭಯ ನಾಯಕರು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT