ವಿಜಯ ಮಲ್ಯ 
ರಾಜ್ಯ

ಉದ್ಯಮಿ ವಿಜಯ ಮಲ್ಯಗೆ ಸಾಲ: ಐಡಿಬಿಐ ಬ್ಯಾಂಕ್‌ ಮಾಜಿ ಅಧ್ಯಕ್ಷ ಸೇರಿ 8 ಮಂದಿ ಬಂಧನ

ಮದ್ಯದ ದೊರೆ ವಿಜಯ ಮಲ್ಯ ಅವರ ಸಾಲ ಬಾಕಿ ಪ್ರಕರಣ ಸಂಬಂಧ ಐಡಿಬಿಐ ಬ್ಯಾಂಕ್‌ ಮಾಜಿ ಮುಖ್ಯಸ್ಥ ಮತ್ತು ಬ್ಯಾಂಕ್‌ನ ಮೂವರು ಮಾಜಿ ಅಧಿಕಾರಿಗಳು...

ಬೆಂಗಳೂರು: ಮದ್ಯದ ದೊರೆ ವಿಜಯ ಮಲ್ಯ ಅವರ ಸಾಲ ಬಾಕಿ ಪ್ರಕರಣ ಸಂಬಂಧ ಐಡಿಬಿಐ ಬ್ಯಾಂಕ್‌ ಮಾಜಿ ಮುಖ್ಯಸ್ಥ ಮತ್ತು ಬ್ಯಾಂಕ್‌ನ ಮೂವರು ಮಾಜಿ ಅಧಿಕಾರಿಗಳು ಮತ್ತು ಕಿಂಗ್‌ಫಿಷರ್‌ ಏರ್‌ಲೈನ್ಸ್‌ನ ನಾಲ್ವರು ಅಧಿಕಾರಿಗಳು ಸೇರಿ ಒಟ್ಟು 8 ಮಂದಿಯನ್ನು ಸಿಬಿಐ ಬಂಧಿಸಿದೆ.

ಬ್ಯಾಂಕ್‌ ಅಧ್ಯಕ್ಷರಾಗಿದ್ದ ಯೋಗೇಶ್ ಅಗರ್ವಾಲ್, ಕಿಂಗ್‌ಫಿಷರ್‌ ಏರ್‌ಲೈನ್ಸ್‌ನ ಮುಖ್ಯ ಹಣಕಾಸು ಅಧಿಕಾರಿಯಾಗಿದ್ದ ಎ. ರಘುನಾಥನ್ ಬಂಧಿತರು ಎಂದು ಸಿಬಿಐ ಮೂಲಗಳು ತಿಳಿಸಿವೆ.

ವಿಜಯ್ ಮಲ್ಯ ಅವರಿಗೆ ಸೇರಿದ ಕಟ್ಟಡಗಳ ಮೇಲೆ ದಾಳಿ ನಡೆಸಿದ ನಂತರ ಸಿಬಿಐ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.

‘ದೆಹಲಿಯಿಂದ ಬಂದ ಸಿಬಿಐ ಅಧಿಕಾರಿಗಳ ತಂಡ ಬೆಂಗಳೂರಿನಲ್ಲಿರುವ ಯುಬಿ ಗ್ರೂಪ್‌ನ ಕಚೇರಿಗಳಿಗೆ ಭೇಟಿ ನೀಡಿದೆ’ ಎಂದು ಸಿಬಿಐ ಹಿರಿಯ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಯುಬಿ ಕಚೇರಿಗಳಿಗೆ ಸಿಬಿಐ ಅಧಿಕಾರಿಗಳು ಭೇಟಿ ನೀಡಿರುವುದು ನಿಜ. ನಾವು  ಎಲ್ಲ ರೀತಿಯಲ್ಲೂ ಸಹಕರಿಸಿದ್ದೇವೆ ಎಂದು  ವಕ್ತಾರ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT