ರಾಜು ಕಾಗೆ 
ರಾಜ್ಯ

ಹಲ್ಲೆ ಪ್ರಕರಣ: ಶಾಸಕ ರಾಜು ಕಾಗೆ ಸೇರಿ 6 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ...

ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಕಾಗವಾಡ ಬಿಜೆಪಿ ಶಾಸಕ ರಾಜು ಕಾಗೆ ಸೇರಿದಂತೆ 8 ಆರೋಪಿಗಳಿಗೆ ಬೆಳಗಾವಿ ಸೆಷನ್ಸ್ ಕೋರ್ಟ್ ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ. 
ಕಾಗವಾಡ ಕ್ಷೇತ್ರದ ಬಿಜೆಪಿ ಶಾಸಕ ರಾಜು ಕಾಗೆ, ಸಹೋದರ ಸಿದ್ದಗೌಡ ಕಾಗೆ, ಪುತ್ರಿ ತೃಪ್ತಿ ಕಾಗೆ, ಶೋಭಾ ಕಾಗೆ ಸೇರಿದಂತೆ ಚಾಲಕ ಬಾಹುಬಲಿಗೆ ಷರತ್ತು ಬದ್ಧ ಜಾಮೀನು ನೀಡಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಹಲ್ಲೆ ಪ್ರಕರಣ ಸಂಬಂಧ ಎಫ್ ಐಆರ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಶಾಸಕ ಕಾಗೆ ಹಾಗೂ ಅವರ ಕುಟುಂಬ ಸದಸ್ಯರನ್ನು ಪೊಲೀಸರು ಜನವರಿ 19ರಂದು ಬಂಧಿಸಿದ್ದರು. ಬಳಿಕ ಕೋರ್ಟ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಫೇಸ್ ಬುಕ್‍'ನಲ್ಲಿ ಕಾಂಗ್ರೆಸ್ ನಾಯಕ ವಿವೇಕ್ ಶೆಟ್ಟಿ ಬಿಜೆಪಿ ವಿರುದ್ಧ ಅವಹೇಳನಕಾರಿ ಸ್ಟೇಟಸ್ ಹಾಕಿದ್ದರು ಎಂದು ಆರೋಪಿಸಿ ರಾಜು ಕಾಗೆ ಸಹೋದರ ಪ್ರಸಾದ್ ಸಿದ್ದಗೌಡಕಾಗೆ ಹಾಗೂ 12 ಜನ ಅಥಣಿ ತಾಲೂಕಿನ ಉಗಾರ  ಗ್ರಾಮದ ವಿವೇಕ್ ಶೆಟ್ಟಿ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದರು. ಜನವರಿ 1ರ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೆಯ ಮೆಟ್ಟಿಲುಗಳ ಮೇಲೆ ಧರಧರನೆ ಎಳೆದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಈ ಎಲ್ಲಾ ದೃಶ್ಯ  ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ವಿವೇಕ್ ಶೆಟ್ಟಿ ದೂರಿನ ಮೇರೆಗೆ ರಾಜುಕಾಗೆ ಸೇರಿದಂತೆ 13 ಮಂದಿ ವಿರುದ್ಧ ಪೊಲೀಸರು ಗೂಂಡಾಗಿರಿ ಕೇಸ್ ದಾಖಲಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT