ಹೊಸಕೆರೆಹಳ್ಳಿಯಲ್ಲಿ ಪತ್ತೆಯಾಗಿರುವ ಮಂಟಪ 
ರಾಜ್ಯ

ಹೊಸಕೆರೆ ಹಳ್ಳಿ ಕೆರೆಯಲ್ಲಿ ಸಿಕ್ಕಿದ್ದು 800 ವರ್ಷಗಳ ಪುರಾತನ ಚೋಳರ ಕಾಲದ ಮಂಟಪ

ನಗರದ ಹೊಸಕೆರೆ ಹಳ್ಳಿಯಲ್ಲಿ ಪತ್ತೆಯಾಗಿರುವ ಮಂಟಪ 800 ವರ್ಷಗಳಷ್ಟು ಪುರಾತನವಾದದ್ದು ಎಂದು ಪುರಾತತ್ವ ಇಲಾಖೆ ಅಧಿಕಾರಿಗಳು...

ಬೆಂಗಳೂರು: ನಗರದ ಹೊಸಕೆರೆ ಹಳ್ಳಿಯಲ್ಲಿ ಪತ್ತೆಯಾಗಿರುವ ಮಂಟಪ 800 ವರ್ಷಗಳಷ್ಟು ಪುರಾತನವಾದದ್ದು ಎಂದು ಪುರಾತತ್ವ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪುರಾತನ ಗಂಗಮ್ಮನ ಮಂಟಪದ ಸ್ಥಳಕ್ಕೆ ಬುಧವಾರ ರಾಜ್ಯ ಪುರಾತತ್ವ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಮಂಟಪವು ಕೆಂಪೇಗೌಡರ ಕಾಲದ್ದು ಎಂದು ಸ್ಥಳೀಯರು ಮಾತನಾಡುತ್ತಿದ್ದರು. ಹೀಗಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದೆವು. ಆದರೆ, ಇದು ಚೋಳರ ಕಾಲದ್ದು ಎಂಬುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಟಪದ ತುಂಬೆಲ್ಲ ನೀರಿದೆ. ನೀರು ಬರದಂತೆ ಸುತ್ತಲೂ ಕಟ್ಟೆ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಮಂಟಪವನ್ನು ಭೂಮಿಯಿಂದ ಹೊರ ತೆಗೆಯಲು ಸಾಧ್ಯವಿಲ್ಲ. ಹೀಗಾಗಿ ಅದು ಇರುವ ಸ್ಥಳದಲ್ಲೇ ಸೂಕ್ತ ವ್ಯವಸ್ಥೆ ಮೂಲಕ  ಮಂಟಪಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ಈ ಮಂಟಪ ಸ್ಥಳೀಯರಿಂದ ಗಂಗಮ್ಮನ ತೊಟ್ಟಿಲು ಎಂದು ಪ್ರಸಿದ್ಧವಾಗಿದೆ. ನಾಲ್ಕು ಕಂಬಗಳಿದ್ದು, ಈ ಕಲ್ಲು ಕಂಬಗಳ ಮೇಲೆ ಕೆತ್ತನೆಯಿರುವ ಕಲ್ಲಿನ ಚಪ್ಪಡಿಗಳಿವೆ,ಇದೇ ರೀತಿಯ ಮಂಟಪಗಳು ಮೈಸೂರು, ಮೇಲುಕೋಟೆ , ಮನ್ಮಥಕೊಂಡ ಮತ್ತು ಹಂಪಿ ಸೇರಿದಂತೆ ಹಲವು ಕಡೆ ಇವೆ. ಇಲ್ಲಿನ ಶಿಲ್ಪಕಲೆ ತುಂಬಾ ವಿಭಿನ್ನವಾಗಿದ್ದು, ತುಂಬಾ ಆಸಕ್ತಿದಾಯಕವಾಗಿವೆ. ಶಾಸನಗಳ ಉತ್ಖನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೋಪಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT