ಹೊಸಕೆರೆಹಳ್ಳಿಯಲ್ಲಿ ಪತ್ತೆಯಾಗಿರುವ ಮಂಟಪ 
ರಾಜ್ಯ

ಹೊಸಕೆರೆ ಹಳ್ಳಿ ಕೆರೆಯಲ್ಲಿ ಸಿಕ್ಕಿದ್ದು 800 ವರ್ಷಗಳ ಪುರಾತನ ಚೋಳರ ಕಾಲದ ಮಂಟಪ

ನಗರದ ಹೊಸಕೆರೆ ಹಳ್ಳಿಯಲ್ಲಿ ಪತ್ತೆಯಾಗಿರುವ ಮಂಟಪ 800 ವರ್ಷಗಳಷ್ಟು ಪುರಾತನವಾದದ್ದು ಎಂದು ಪುರಾತತ್ವ ಇಲಾಖೆ ಅಧಿಕಾರಿಗಳು...

ಬೆಂಗಳೂರು: ನಗರದ ಹೊಸಕೆರೆ ಹಳ್ಳಿಯಲ್ಲಿ ಪತ್ತೆಯಾಗಿರುವ ಮಂಟಪ 800 ವರ್ಷಗಳಷ್ಟು ಪುರಾತನವಾದದ್ದು ಎಂದು ಪುರಾತತ್ವ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪುರಾತನ ಗಂಗಮ್ಮನ ಮಂಟಪದ ಸ್ಥಳಕ್ಕೆ ಬುಧವಾರ ರಾಜ್ಯ ಪುರಾತತ್ವ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಮಂಟಪವು ಕೆಂಪೇಗೌಡರ ಕಾಲದ್ದು ಎಂದು ಸ್ಥಳೀಯರು ಮಾತನಾಡುತ್ತಿದ್ದರು. ಹೀಗಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದೆವು. ಆದರೆ, ಇದು ಚೋಳರ ಕಾಲದ್ದು ಎಂಬುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಟಪದ ತುಂಬೆಲ್ಲ ನೀರಿದೆ. ನೀರು ಬರದಂತೆ ಸುತ್ತಲೂ ಕಟ್ಟೆ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಮಂಟಪವನ್ನು ಭೂಮಿಯಿಂದ ಹೊರ ತೆಗೆಯಲು ಸಾಧ್ಯವಿಲ್ಲ. ಹೀಗಾಗಿ ಅದು ಇರುವ ಸ್ಥಳದಲ್ಲೇ ಸೂಕ್ತ ವ್ಯವಸ್ಥೆ ಮೂಲಕ  ಮಂಟಪಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ಈ ಮಂಟಪ ಸ್ಥಳೀಯರಿಂದ ಗಂಗಮ್ಮನ ತೊಟ್ಟಿಲು ಎಂದು ಪ್ರಸಿದ್ಧವಾಗಿದೆ. ನಾಲ್ಕು ಕಂಬಗಳಿದ್ದು, ಈ ಕಲ್ಲು ಕಂಬಗಳ ಮೇಲೆ ಕೆತ್ತನೆಯಿರುವ ಕಲ್ಲಿನ ಚಪ್ಪಡಿಗಳಿವೆ,ಇದೇ ರೀತಿಯ ಮಂಟಪಗಳು ಮೈಸೂರು, ಮೇಲುಕೋಟೆ , ಮನ್ಮಥಕೊಂಡ ಮತ್ತು ಹಂಪಿ ಸೇರಿದಂತೆ ಹಲವು ಕಡೆ ಇವೆ. ಇಲ್ಲಿನ ಶಿಲ್ಪಕಲೆ ತುಂಬಾ ವಿಭಿನ್ನವಾಗಿದ್ದು, ತುಂಬಾ ಆಸಕ್ತಿದಾಯಕವಾಗಿವೆ. ಶಾಸನಗಳ ಉತ್ಖನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೋಪಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT