ಸಾಂದರ್ಭಿಕ ಚಿತ್ರ 
ರಾಜ್ಯ

ಇನ್ಮುಂದೆ ಮೂರು ತಿಂಗಳಿಗೊಮ್ಮೆ ಪಡಿತರ ಧಾನ್ಯ ವಿತರಣೆ?

ಇನ್ನು ಮುಂದೆ ಮೂರು ತಿಂಗಳಿಗೊಮ್ಮೆ ಪಡಿತರ ಧಾನ್ಯ ವಿತರಣೆ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ...

ಮಂಗಳೂರು: ಇನ್ನು ಮುಂದೆ ಮೂರು ತಿಂಗಳಿಗೊಮ್ಮೆ ಪಡಿತರ ಧಾನ್ಯ ವಿತರಣೆ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ.

ಪ್ರತಿ ತಿಂಗಳು ವಿತರಿಸಲು ಹಾಗೂ ಫಲಾನುಭವಿಗಳು ರೇಷನ್ ಪಡೆದುಕೊಳ್ಳಲು ಹಲವು ತೊಡಕುಗಳು ಎದುರಾಗುತ್ತಿವೆ, ವಿಶೇಷವಾಗಿ ನಿಯಂತ್ರಿತ ಪ್ರದೇಶದಲ್ಲಿರುವ ಜನರು ಪಡಿತರ ಧಾನ್ಯ ಪಡೆದುಕೊಳ್ಳಲು ಪ್ರತಿ ತಿಂಗಳು ಹರಸಾಹಸ ಪಡಬೇಕಾಗಿದೆ. ಇದನ್ನು ತಪ್ಪಿಸಲು ಮೂರು ತಿಂಗಳಿಗೊಮ್ಮೆ ರೇಷನ್ ವಿತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಪ್ರತಿ ತಿಂಗಳು ಪಡಿತರ ಧಾನ್ಯ ಖರೀದಿಸಲು ಬಡಜನರಿಗೆ ತಗಲುವ ಸಾಗಣೆ ವೆಚ್ಚ ಉಳಿತಾಯ ಮಾಡಲು ಮೂರು ತಿಂಗಳಿಗೊಮ್ಮೆ ರೇಷನ್ ವಿತರಿಸಲು ಚಿಂತನೆ ನಡೆಸುತ್ತಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಪ್ರಸ್ತಾವನೆಗೆ ಅನುಮೋದನೆ ದೊರೆತರೇ ಜನರಿಗೆ ಇದರಿಂದ ಬಹಳ ಪ್ರಯೋಜನವಾಗಲಿದೆ ಎಂದು ಅವರು ಹೇಳಿದ್ದಾರೆ.

ಜನರಿಗೆ ಪೂರೈಸುತ್ತಿರುವ ಪಡಿತರದ ಜೊತೆ ಪ್ರೊಟೀನ್ ಆಹಾರವಾದ ಬೆಳೆಯನ್ನು ಕೂಡ ನೀಡಲಾಗುತ್ತದೆ. ಫೆಬ್ರವರಿ 1 ರಿಂದ 1 ಕೆಜಿ ಬೇಳೆಯನ್ನು ಸಬ್ಸಿಡಿ ದರದಲ್ಲಿ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT