ವಜುಭಾಯ್ ವಾಲಾ 
ರಾಜ್ಯ

ಗಣರಾಜ್ಯೋತ್ಸವ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

68ನೇ ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಾಜೂಭಾಯ್ ವಾಲಾ ಅವರು ಧ್ವಜಾರೋಹಣ...

ಬೆಂಗಳೂರು: 68ನೇ ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಾಜೂಭಾಯ್ ವಾಲಾ ಅವರು ಧ್ವಜಾರೋಹಣ ಮಾಡಿದರು.

ಗಣರಾಜ್ಯೋತ್ಸವ ಉದ್ದೇಶಿಸಿ ಭಾಷಣ ಮಾಡಿದ ವಜುಭಾಯ್ ವಾಲಾ ಅವರು, ಕರ್ನಾಟಕದ ಜನರು ರಾಜ್ಯದ ಅಭಿವೃದ್ಧಿಗೆ ಅನುಕೂಲಕರ ವಾತಾವರಣ ನಿರ್ಮಿಸಿದ್ದಾರೆ. ರಾಜ್ಯ ಸರ್ಕಾರದ ಹಲವು ಯೋಜನೆಗಳು ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿವೆ. ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಇತರ ರಾಜ್ಯಗಳಿಗೆ ಮಾದರಿಯಾಗಿದೆ. ರಾಜ್ಯದ ಐಟಿಬಿಟಿ ಕ್ಷೇತ್ರಗಳಲ್ಲಿ ಪ್ರತಿವರ್ಷ ಸಾಕಷ್ಟು ಉದ್ಯೋಗಗಳು ಸೃಷ್ಠಿಯಾಗುತ್ತಿದೆ. ರಾಜ್ಯದ ರೈತರ ಅಭಿವೃದ್ಧಿಗಾಗಿ ಹಲವು ಯೋಜನೆಗಳು ಜಾರಿಗೆ ತರಲಾಗಿದೆ ಎಂದರು.

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾರತೀಯ ಸೇನೆ, ನೌಕಾಪಡೆ, ವಾಯುಪಡೆ, ಕೆಎಸ್ಆರ್ಪಿ, ಅಗ್ನಿಶಾಮಕ ದಳ, ಹೋಮ್ ಗಾರ್ಡ್ಸ್ ಸೇರಿದಂತೆ ಹಲವು ಶಾಲಾ ಮಕ್ಕಳು ಪಥಸಂಚಲನದಲ್ಲಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT