ರಾಜ್ಯ

ವಿಜಯ್ ಮಲ್ಯ ವಿರುದ್ಧ ಜಾಮೀನು ಸಹಿತ ವಾರಂಟ್ ಹೊರಡಿಸಿದ ಕರ್ನಾಟಕ ಹೈಕೋರ್ಟ್

Sumana Upadhyaya
ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ಮದ್ಯ ದೊರೆ ವಿಜಯ್ ಮಲ್ಯ ಅವರಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಜಾಮೀನು ಸಹಿತ ವಾರಂಟ್ ವಿಧಿಸಿದೆ.  
ಬ್ಯಾಂಕ್ ಗಳ ಸಮೂಹ ಮಲ್ಯ ವಿರುದ್ಧ ನ್ಯಾಯಾಂಗ ನಿಂದನೆ ಕೇಸು ದಾಖಲಿಸಿದ್ದಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಇಂದು ಈ ಆದೇಶ ಹೊರಡಿಸಿದೆ.ನ್ಯಾಯಮೂರ್ತಿಗಳಾದ ಜಯಂತ್ ಎಮ್ ಪಟೇಲ್ ಮತ್ತು ಅರವಿಂದ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಮೊನ್ನೆ ಜನವರಿ 20ರಂದು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದರು. 
ಫೆಬ್ರವರಿ 19ಕ್ಕೆ ಮತ್ತೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿದೆ. ಈ ಮುನ್ನ ಕಳೆದ ಜನವರಿ 19ರಂದು ನ್ಯಾಯಾಧೀಕರಣ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಸಮೂಹ ಬ್ಯಾಂಕುಗಳಿಗೆ ಆದೇಶ ನೀಡಿ ಮಲ್ಯರಿಂದ 6,000 ಕೋಟಿಗೂ ಅಧಿಕ ಸಾಲವನ್ನು ಹಿಂಪಡೆದುಕೊಳ್ಳುವಂತೆ ಸೂಚಿಸಿತ್ತು. ಇದರಲ್ಲಿ ಮಲ್ಯ ಅವರು ಕಾನೂನು ಉಲ್ಲಂಘಿಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೇಳಲಾಗಿತ್ತು. 
SCROLL FOR NEXT