ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಹೆಚ್ಚುತ್ತಿರುವ ಹುಲಿಗಳ ಸಾವು: ತನಿಖೆಗೆ ಸಮಿತಿ ರಚನೆ

ಕಳೆದ ಡಿಸೆಂಬರ್ ಮತ್ತು ಜನವರಿಯಲ್ಲಿ ರಾಜ್ಯದಲ್ಲಿ ಹುಲಿಗಳ ಸಾವಿನ ಸಂಖ್ಯೆ ಏರುತ್ತಿರುವುದರ ಸಂಬಂಧ ತನಿಖೆ ನಡೆಸಲು ಅರಣ್ಯ ಇಲಾಖೆ ಮೂರು ...

ಬೆಂಗಳೂರು: ಕಳೆದ ಡಿಸೆಂಬರ್ ಮತ್ತು ಜನವರಿಯಲ್ಲಿ ರಾಜ್ಯದಲ್ಲಿ ಹುಲಿಗಳ ಸಾವಿನ ಸಂಖ್ಯೆ ಏರುತ್ತಿರುವುದರ ಸಂಬಂಧ ತನಿಖೆ ನಡೆಸಲು ಅರಣ್ಯ ಇಲಾಖೆ ಮೂರು ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದೆ.

ನಾಗರಹೊಳೆ ಹಾಗೂ ಬಂಡಿಪುರ ಅಭಯಾರಣ್ಯ ಎರಡು ತಿಂಗಳಲ್ಲಿ 10 ಹುಲಿಗಳು ದಾರುಣ ಸಾವನ್ನಪ್ಪಿದ್ದು ಇವುಗಳ ತನಿಖೆಗೆ ಸಮಿತಿ ರಚಿಸಲಾಗಿದೆ ಎಂದು ಅರಣ್ಯ ಸಚಿವ ರಮಾನಾಥ ರೈ ತಿಳಿಸಿದ್ದಾರೆ.

ಇಚ್ಚೀಚೆಗೆ ನಡೆದ ಟೈಗರ್ ಕನ್ಸರ್ವೇಶನ್ ಫೌಂಡೆಶನ್ ಸಭೆಯಲ್ಲಿ ಹುಲಿಗಳ ಸಾವಿನ ವಿಷಯದ ಬಗ್ಗೆ ಚರ್ಚಿಸಲಾಯಿತು. ಈ ವೇಳೆ ಹುಲಿಗಳ ಸಾವಿನ ಸಂಖ್ಯೆ ಏರುತ್ತಿರುವುದರ ಕಾರಣ ತಿಳಿದುಕೊಳ್ಳಲು ಮೂರು ಸದಸ್ಯರನ್ನೊಳಗೊಂಡ ಸಮಿತಿ ರಚಿಸಲು ತೀರ್ಮಾನಿಸಲಾತು ಎಂದು ತಿಳಿಸಿದ್ದಾರೆ.

ಜನವರಿ 17 ರಂದು ನಾಗರಹೊಳೆ ಅರಣ್ಯ ವ್ಯಾಪ್ತಿಯ ಅಂತರಸಂತೆ ಗ್ರಾಮದಲ್ಲಿ ಹೆಣ್ಣು ಹುಲಿ ಸಾವು ವಿವಾದಕ್ಕೆ ಕಾರಣವಾಗಿತ್ತು. ಓವರ್ ಡೋಸ್ ಅರಿವಳಿಕೆ ಮದ್ದಿನಿಂದಾಗ ಹುಲಿ ಸಾವನ್ನಪ್ಪಿದೆ ಎಂಬುದರ ಬಗ್ಗೆ ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ.

ಓನರ್ ಡೋಸ್ ನಿಂದಾಗಿ ಮೃತಪಟ್ಟಿರುವ ಹೆಣ್ಣು ಹುಲಿಯ ಮರಣೋತ್ತರ ಪರೀಕ್ಷೆಗಾಗಿ ಇನ್ನೂ ಕಾಯುತ್ತಿದ್ದೇವೆ, ವರದಿ ಸಿಕ್ಕ ಕೂಡಲೇ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ನಾಗರಹೊಳೆ ಹುಲಿ ಮೀಸಲು ಅರಣ್ಯ ನಿರ್ದೇಶಕ ಮಣಿಕಂಠನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT