ಮೈಸೂರು ಮೃಗಾಲಯ 
ರಾಜ್ಯ

ಮೈಸೂರು ಮೃಗಾಲಯ ಸದ್ಯದಲ್ಲಿಯೇ ಸಾರ್ವಜನಿಕ ಪ್ರವೇಶಕ್ಕೆ ಮುಕ್ತ

ಕೆಲವು ವಲಸೆ ಹಕ್ಕಿಗಳು ಮತ್ತು ಹಕ್ಕಿ ಜ್ವರದ ಭೀತಿಯಿಂದ ತಿಂಗಳ ಹಿಂದೆ ಮುಚ್ಚಲ್ಪಟ್ಟಿದ್ದ ಮೈಸೂರು ಶ್ರೀ...

ಮೈಸೂರು: ಕೆಲವು ವಲಸೆ ಹಕ್ಕಿಗಳು ಮತ್ತು ಹಕ್ಕಿ ಜ್ವರದ ಭೀತಿಯಿಂದ ತಿಂಗಳ ಹಿಂದೆ ಮುಚ್ಚಲ್ಪಟ್ಟಿದ್ದ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯ ಇನ್ನು ಒಂದೆರಡು ದಿನಗಳಲ್ಲಿ ಮತ್ತೆ ತೆರೆದುಕೊಳ್ಳಲಿದೆ.
ಭೋಪಾಲ್ ನ ಅತಿ ಭದ್ರತೆ ಮತ್ತು ಪ್ರಾಣಿ ರೋಗ ರಾಷ್ಟ್ರೀಯ ಸಂಸ್ಥೆಗೆ ಮೃಗಾಲಯದ ಒಳಗಿನ ಮಣ್ಣು, ನೀರು ಮತ್ತು ಚರಟದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಅದು ಋಣಾತ್ಮಕ ಫಲಿತಾಂಶವನ್ನು ನೀಡಿದೆ. ಹಾಗಾಗಿ ಮೃಗಾಲಯವನ್ನು ಮತ್ತೆ ಸಾರ್ವಜನಿಕ ವೀಕ್ಷಣೆಗೆ ತೆರೆಯಲಾಗುತ್ತದೆ.
ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯೊಂದಿಗೆ ಮಾತನಾಡಿದ ಮೈಸೂರು ಮೃಗಾಲಯದ ಕಾರ್ಯಕಾರಿ ನಿರ್ದೇಶಕ ಕೆ. ಕಮಲಾ, ಭೋಪಾಲ್ ಸಂಸ್ಥೆ ನೀಡಿರುವ ವರದಿಗಳ ಫಲಿತಾಂಶ ಬಗ್ಗೆ ವಿಶ್ಲೇಷಣೆ ಮಾಡಲು ಬೆಂಗಳೂರಿನಲ್ಲಿ ಇಂದು 11 ಗಂಟೆಗೆ ಸಭೆ ಕರೆಯಲಾಗಿದೆ. ಪಶುಸಂಗೋಪನಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಬಹುಶಃ ಇನ್ನು ಒಂದೆರಡು ದಿನಗಳಲ್ಲಿ ಮೃಗಾಲಯ ತೆರೆಯಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT