ಸಂಗ್ರಹ ಚಿತ್ರ 
ರಾಜ್ಯ

ಮಣ್ಣಲ್ಲಿ ಮಣ್ಣಾದ ಹಾಸನದ ಯೋಧ ಸಂದೀಪ್!

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್‌ ಸೇನಾ ಶಿಬಿರದ ಮೇಲೆ ಕಳೆದ ಬುಧವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾಗಿದ್ದ ಕರ್ನಾಟಕದ ಯೋಧ ಸಂದೀಪ್‌ ಶೆಟ್ಟಿ ಅವರ ಅಂತ್ಯಕ್ರಿಯೆಯನ್ನು ಬುಧವಾರ ನಡೆಸಲಾಯಿತು.

ಹಾಸನ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್‌ ಸೇನಾ ಶಿಬಿರದ ಮೇಲೆ ಕಳೆದ ಬುಧವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾಗಿದ್ದ ಕರ್ನಾಟಕದ ಯೋಧ ಸಂದೀಪ್‌ ಶೆಟ್ಟಿ ಅವರ  ಅಂತ್ಯಕ್ರಿಯೆಯನ್ನು ಬುಧವಾರ ನಡೆಸಲಾಯಿತು.

ಸಂದೀಪ್ ಶೆಟ್ಟಿ ಅವರ ಹುಟ್ಟೂರಾದ ದೇವಿಹಳ್ಳಿಯ ಮನೆ ಬಳಿ ಇರುವ ಜಮೀನಿನಲ್ಲಿ ದೇವಾಂಗ ಸಂಪ್ರದಾಯದಂತೆ ಸಂದೀಪ್ ಶೆಟ್ಟಿ ಅವರ ಪಾರ್ಥೀವ ಶರೀರವನ್ನು ಮಣ್ಣು ಮಾಡಲಾಯಿತು. ದೇವಾಂಗ ಮಠದ ಶ್ರೀಗಳಾದ  ದಯಾನಂದಪುರಿ ಸ್ವಾಮೀಜಿ ,ಹಾಸನದ ಜಿಲ್ಲಾಧಿಕಾರಿ ವಿ. ಚೈತ್ರಾ, ಎಸಿ ನಾಗರಾಜು ,ಪೊಲೀಸ್‌ ಅಧಿಕಾರಿಗಳು ಸೇರಿ ರಾಜಕೀಯ ಮುಖಂಡರು ಸಾವಿರಾರು ಗ್ರಾಮಸ್ಥರು ಅಂತ್ಯಕ್ರಿಯೆ ವೇಳೆ ಹಾಜರಿದ್ದು  ವೀರ ಯೋಧನಿಗೆ  ಅಂತಿಮ ನಮನ ಸಲ್ಲಿಸಿ ಕಂಬನಿ ಮಿಡಿದರು.

ಇದಕ್ಕೂ ಮೊದಲು ನಡೆದ ಅಂತ್ಯಕ್ರಿಯಾ ವಿಧಿ ವೇಳೆ ಸೇನಾಪಡೆಯ ಯೋಧರು ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಿದರು.

ದೇವಿಹಳ್ಳಿಯ ಪುಟ್ಟರಾಜು ಮತ್ತು ಗಂಗಮ್ಮ ದಂಪತಿಯ ಕಿರಿಯ ಪುತ್ರನಾಗಿದ್ದ ಸಂದೀಪ್‌ ಶೆಟ್ಟಿ ಹಾಸನದ ಎಂ.ಕೃಷ್ಣ ಪದವಿ ಪೂರ್ವ ಕಾಲೇಜಿನಲ್ಲಿ  ದ್ವಿತೀಯ ಪಿಯುವರೆಗೆ ಓದಿದ್ದರು. ಅಲ್ಲದೆ ಶಿಕ್ಷಕರಾಗುವ ಕನಸು ಕಂಡಿದ್ದರು. ಬಳಿಕ  ಸೇನೆ ಸೇರಲು ನಿಶ್ಚಯಿಸಿ 2010ರಲ್ಲಿ ಸೇನೆ ಸೇರಿದ್ದರು. ಮೊದಲು ಗುಜರಾತ್‌ ಸೇನಾ ವಲಯದಲ್ಲಿ  ಸೇವೆ ಸಲ್ಲಿಸಿದ್ದ ಸಂದೀಪ್‌ ಅವರು, ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ ವರ್ಗಾವಣೆಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT