ಸಂಗ್ರಹ ಚಿತ್ರ 
ರಾಜ್ಯ

ಮಣ್ಣಲ್ಲಿ ಮಣ್ಣಾದ ಹಾಸನದ ಯೋಧ ಸಂದೀಪ್!

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್‌ ಸೇನಾ ಶಿಬಿರದ ಮೇಲೆ ಕಳೆದ ಬುಧವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾಗಿದ್ದ ಕರ್ನಾಟಕದ ಯೋಧ ಸಂದೀಪ್‌ ಶೆಟ್ಟಿ ಅವರ ಅಂತ್ಯಕ್ರಿಯೆಯನ್ನು ಬುಧವಾರ ನಡೆಸಲಾಯಿತು.

ಹಾಸನ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್‌ ಸೇನಾ ಶಿಬಿರದ ಮೇಲೆ ಕಳೆದ ಬುಧವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾಗಿದ್ದ ಕರ್ನಾಟಕದ ಯೋಧ ಸಂದೀಪ್‌ ಶೆಟ್ಟಿ ಅವರ  ಅಂತ್ಯಕ್ರಿಯೆಯನ್ನು ಬುಧವಾರ ನಡೆಸಲಾಯಿತು.

ಸಂದೀಪ್ ಶೆಟ್ಟಿ ಅವರ ಹುಟ್ಟೂರಾದ ದೇವಿಹಳ್ಳಿಯ ಮನೆ ಬಳಿ ಇರುವ ಜಮೀನಿನಲ್ಲಿ ದೇವಾಂಗ ಸಂಪ್ರದಾಯದಂತೆ ಸಂದೀಪ್ ಶೆಟ್ಟಿ ಅವರ ಪಾರ್ಥೀವ ಶರೀರವನ್ನು ಮಣ್ಣು ಮಾಡಲಾಯಿತು. ದೇವಾಂಗ ಮಠದ ಶ್ರೀಗಳಾದ  ದಯಾನಂದಪುರಿ ಸ್ವಾಮೀಜಿ ,ಹಾಸನದ ಜಿಲ್ಲಾಧಿಕಾರಿ ವಿ. ಚೈತ್ರಾ, ಎಸಿ ನಾಗರಾಜು ,ಪೊಲೀಸ್‌ ಅಧಿಕಾರಿಗಳು ಸೇರಿ ರಾಜಕೀಯ ಮುಖಂಡರು ಸಾವಿರಾರು ಗ್ರಾಮಸ್ಥರು ಅಂತ್ಯಕ್ರಿಯೆ ವೇಳೆ ಹಾಜರಿದ್ದು  ವೀರ ಯೋಧನಿಗೆ  ಅಂತಿಮ ನಮನ ಸಲ್ಲಿಸಿ ಕಂಬನಿ ಮಿಡಿದರು.

ಇದಕ್ಕೂ ಮೊದಲು ನಡೆದ ಅಂತ್ಯಕ್ರಿಯಾ ವಿಧಿ ವೇಳೆ ಸೇನಾಪಡೆಯ ಯೋಧರು ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಿದರು.

ದೇವಿಹಳ್ಳಿಯ ಪುಟ್ಟರಾಜು ಮತ್ತು ಗಂಗಮ್ಮ ದಂಪತಿಯ ಕಿರಿಯ ಪುತ್ರನಾಗಿದ್ದ ಸಂದೀಪ್‌ ಶೆಟ್ಟಿ ಹಾಸನದ ಎಂ.ಕೃಷ್ಣ ಪದವಿ ಪೂರ್ವ ಕಾಲೇಜಿನಲ್ಲಿ  ದ್ವಿತೀಯ ಪಿಯುವರೆಗೆ ಓದಿದ್ದರು. ಅಲ್ಲದೆ ಶಿಕ್ಷಕರಾಗುವ ಕನಸು ಕಂಡಿದ್ದರು. ಬಳಿಕ  ಸೇನೆ ಸೇರಲು ನಿಶ್ಚಯಿಸಿ 2010ರಲ್ಲಿ ಸೇನೆ ಸೇರಿದ್ದರು. ಮೊದಲು ಗುಜರಾತ್‌ ಸೇನಾ ವಲಯದಲ್ಲಿ  ಸೇವೆ ಸಲ್ಲಿಸಿದ್ದ ಸಂದೀಪ್‌ ಅವರು, ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ ವರ್ಗಾವಣೆಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT