ಸಿದ್ದರಾಮಯ್ಯ ಮತ್ತು ಜಿ. ಮಾದೇಗೌಡ 
ರಾಜ್ಯ

ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಿ: ಸಿಎಂ ಗೆ ಜಿ. ಮಾದೇಗೌಡ ಆಗ್ರಹ

ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಮಂಡ್ಯದ ಹಲವು ಭಾಗಗಳಲ್ಲಿ ರೈತರು ರಸ್ತೆ ತಡೆ ನಡೆಸುವ ಮೂಲಕ ...

ಮೈಸೂರು:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಮಂಡ್ಯದ ಹಲವು ಭಾಗಗಳಲ್ಲಿ ರೈತರು ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ  ನಡೆಸಿದರು.
ಈ ವೇಳೆ ಮಾತನಾಡಿದ  ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ ಜಿ. ಮಾದೇಗೌಡ ಸೋಮವಾರದಿಂದ ತಾವು ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ.
ಸಮಿತಿಯು ಸಭೆ ಸೇರಿ ಮುಂದಿನ ಹಂತದ ಹೋರಾಟದ ಬಗ್ಗೆ ರೂಪು ರೇಷೆ ಸಿದ್ದಪಡಿಸಲಾಗುವುದು ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ತಮಿಳುನಾಡಿಗೆ ನೀರು ಬಿಡುತ್ತಿರುವ ಸಂಬಂಧ ಮೌನವಾಗಿರುವುದನ್ನು ಬಿಟ್ಟು ಕೂಡಲೇ ನೀರು ಬಿಡದಂತೆ ಕ್ರಮ  ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಕಾವೇರಿ ನ್ಯಾಯಮಂಡಳಿ ಸೂಚನೆ ಮೇರೆಗೆ ತಮಿಳುನಾಡಿಗೆ ನೀರು ಬಿಡುತ್ತಿರುವುದಾಗಿ ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ನೀಡಿದ್ದಾರೆ. ಆದರೆ ಮಳೆಯಿಲ್ಲದೇ, ಜಲಾಶಯ ಬರಿದಾಗಿರುವ ಸಮಯದಲ್ಲೂ ತಮಿಳುನಾಡಿಗೆ ನೀರು ಬಿಡಬೇಕು ಎಂದು ನ್ಯಾಯಮಂಡಳಿ ಸೂಚಿಸಿದೆಯೇ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT