ಆರೋಗ್ಯ ಸಚಿವ ರಮೇಶ್ ಕುಮಾರ್ 
ರಾಜ್ಯ

ಎಲ್ಲಾ ಕುಟುಂಬಗಳಿಗೂ ಯೂನಿವರ್ಸಲ್ ಹೆಲ್ತ್ ಕಾರ್ಡ್ ವಿತರಿಸಲು ರಾಜ್ಯ ಸರ್ಕಾರದ ಪ್ರಸ್ತಾವನೆ

ರಾಜ್ಯದ ಎಲ್ಲಾ ಕುಟುಂಬಗಳಿಗೂ ಯೂನಿವರ್ಸಲ್ ಹೆಲ್ತ್ ಕಾರ್ಡ್ ವಿತರಣೆ ಮಾಡುವ ಹೊಸ ಯೋಜನೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಬೆಂಗಳೂರು: ರಾಜ್ಯದ ಎಲ್ಲಾ ಕುಟುಂಬಗಳಿಗೂ ಯೂನಿವರ್ಸಲ್ ಹೆಲ್ತ್ ಕಾರ್ಡ್ ವಿತರಣೆ ಮಾಡುವ ಹೊಸ ಯೋಜನೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. 
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆರೋಗ್ಯ ಸಚಿವ ರಮೇಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಎಲ್ಲಾ ಕುಟುಂಬಗಳಿಗೂ ಯೂನಿವರ್ಸಲ್ ಹೆಲ್ತ್ ಕಾರ್ಡ್ ನೀಡುವ ಪ್ರಸ್ತಾವನೆಯನ್ನು ಶೀಘ್ರವೇ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಅಂಗೀಕರಿಸಲಾಗುತ್ತದೆ. ಹೆಲ್ತ್ ಕಾರ್ಡ್ ಅಡಿಯಲ್ಲಿ ಕಡಿಮೆ ದರ/ಉಚಿತವಾಗಿ ಆರೋಗ್ಯ ಸೇವೆಯನ್ನು ಪಡೆಯಬೇಕಿರುವವರಿಗೆ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಳ ಅಗತ್ಯವಿರುವುದಿಲ್ಲ, ಬದಲಾಗಿ ಹೆಲ್ತ್ ಕಾರ್ಡ್ ನೊಂದಿಗೆ ಆಧಾರ್ ನಂಬರ್ ನ್ನು ಲಿಂಕ್ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ. 
ಯೂನಿವರ್ಸಲ್ ಹೆಲ್ತ್ ಕಾರ್ಡ್ ಯೋಜನೆಗೆ ಒಮ್ಮೆ ಅನುಮೋದನೆ ದೊರೆತರೆ, ರಾಜೀವ್ ಆರೋಗ್ಯ ಭಾಗ್ಯ, ಯಶಸ್ವಿನಿ ಹಾಗೂ ಇನ್ನಿತರ ಯೋಜನೆಗಳ ಲಾಭವನ್ನು ಕಾರ್ಡ್ ಮೂಲಕವೇ ಪಡೆದುಕೊಳ್ಳಬಹುದು ಎಂದು ರಮೇಶ್ ಕುಮಾರ್ ಹೇಳಿದ್ದಾರೆ. 
1.30 ಕೋಟಿ ಕುಟುಂಬಗಳು ಯೂನಿವರ್ಸಲ್ ಹೆಲ್ತ್ ಕಾರ್ಡ್ ನ ಫಲಾನುಭವಿಗಳಾಗಲಿದ್ದಾರೆ. ವಿವಿಧ ಆರೋಗ್ಯ ಯೋಜನೆಗಳಿಗೆ ರಾಜ್ಯ ಸರ್ಕಾರ 1,022 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ, ಈ ಹಣವನ್ನು ಹೊಸ ಯೋಜನೆಗೆ ವರ್ಗಾವಣೆ ಮಾಡಲಾಗುವುದು ಎಂದು ಸಚಿವ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT