ಸುಪ್ರೀಂಕೋರ್ಟ್ 
ರಾಜ್ಯ

ಕರ್ನಾಟಕದಿಂದ ಕಾವೇರಿ ಮಲಿನ; ತಮಿಳುನಾಡಿನಿಂದ ಮತ್ತೆ ಕ್ಯಾತೆ

ಕಾವೇರಿ ನದಿ ನೀರು ವಿವಾದ ಕುರಿತಂತೆ ಪದೇ ಪದೇ ಕಾಲು ಕೆರೆದುಕೊಂಡು ಬರುತ್ತಿರುವ ತಮಿಳುನಾಡು, ಮತ್ತೊಮ್ಮೆ ಕಾವೇರಿ ಕುರಿತಂತೆ ಕ್ಯಾತೆ ತೆಗೆದಿದ್ದು ಕರ್ನಾಟಕದವರು ಕಾವೇರಿಯನ್ನು ಮಲಿನಗೊಳಿಸುತ್ತಿದ್ದಾರೆಂದು ಸುಪ್ರೀಂಕೋರ್ಟ್ ನಲ್ಲಿ ದೂರು ನೀಡಿದ್ದಾರೆ...

ನವದೆಹಲಿ: ಕಾವೇರಿ ನದಿ ನೀರು ವಿವಾದ ಕುರಿತಂತೆ ಪದೇ ಪದೇ ಕಾಲು ಕೆರೆದುಕೊಂಡು ಬರುತ್ತಿರುವ ತಮಿಳುನಾಡು, ಮತ್ತೊಮ್ಮೆ ಕಾವೇರಿ ಕುರಿತಂತೆ ಕ್ಯಾತೆ ತೆಗೆದಿದ್ದು ಕರ್ನಾಟಕದವರು ಕಾವೇರಿಯನ್ನು ಮಲಿನಗೊಳಿಸುತ್ತಿದ್ದಾರೆಂದು ಸುಪ್ರೀಂಕೋರ್ಟ್ ನಲ್ಲಿ ದೂರು ನೀಡಿದ್ದಾರೆ. 
ಕಾವೇರಿ ಕುರಿತಂತೆ ಕರ್ನಾಟಕ ರಾಜ್ಯಕ್ಕೆ ಕಳಂಕ ಹಚ್ಚುವ ಪ್ರಯತ್ನವನ್ನು ಮುಂದುವರೆಸಿರುವ ತಮಿಳುನಾಡು ರಾಜ್ಯ, ಕನ್ನಡಿಗರ ಜೀನವಾಡಿಯಾಗಿರುವ ಕಾವೇರಿ ನದಿಯನ್ನೇ ಕರ್ನಾಟಕ ಮಲಿನಗೊಳಿಸುತ್ತಿದೆ ಎಂದು ಆರೋಪ ಮಾಡಿದೆ. 
ತಮಿಳುನಾಡು ಮಾಡಿರುವ ಈ ಆರೋಪವನ್ನು ಪರಿಗಣನೆಗೆ ತೆಗೆದುಕೊಂಡಿರುವ ನ್ಯಾಯಾಲಯ ಈ ಬಗ್ಗೆ 6 ತಿಂಗಳೊಳಗಾಗಿ ವರದಿ ಸಲ್ಲಿಸುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ)ಗೆ ಸೂಚನೆ ನೀಡಿದೆ. ಅಲ್ಲದೆ, ಉಭಯ ರಾಜ್ಯಗಳ ಪ್ರತಿನಿಧಿಗಳು ಈ ಬಗ್ಗೆ ಸಭೆ ನಡೆಸಲು ಸುಪ್ರೀಂ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 
ದಿನಗಳ ಹಿಂದಷ್ಟೇ ಕಾವೇರಿ ಕುರಿತಂತೆ ಕ್ಯಾತೆ ತೆಗೆದಿದ್ದ ತಮಿಳುನಾಡು, ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಆದೇಶವನ್ನು ಕರ್ನಾಟಕ ಸರ್ಕಾರ ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಈಗಲೂ ತಮಿಳುನಾಡು ರಾಜ್ಯಕ್ಕೆ  5.966 ಟಿಎಂಸಿ ನೀರು ಹರಿಸುವುದು ಬಾಕಿಯಿದ್ದು, ಕೂಡಲೇ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT