ಕನ್ನಡ 
ರಾಜ್ಯ

ಕನ್ನಡ ಮಾಧ್ಯಮದವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲು: ರಾಜ್ಯ ಸರ್ಕಾರದಿಂದ ಪರಿಷ್ಕೃತ ಸುತ್ತೋಲೆ

ಒಂದರಿಂದ ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ನೇರ ನೇಮಕಾತಿಯಲ್ಲಿ ಶೇ 5ರಷ್ಟು ಹುದ್ದೆಗಳನ್ನು ಮೀಸಲಿಡುವ ...

ಬೆಂಗಳೂರು: ಒಂದರಿಂದ ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ನೇರ ನೇಮಕಾತಿಯಲ್ಲಿ ಶೇ 5ರಷ್ಟು ಹುದ್ದೆಗಳನ್ನು ಮೀಸಲಿಡುವ ನಿಯಮಗಳಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಕನ್ನಡ ಮಾಧ್ಯಮ ಮೀಸಲಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೇ 10ನೇ ತರಗತಿಯವರೆಗೂ ಕನ್ನಡ ಮಾಧ್ಯಮದಲ್ಲಿ ಓದಿರಬೇಕಿತ್ತು.  ಕನಿಷ್ಠ ವಿದ್ಯಾರ್ಹತೆ ಏಳನೇ ತರಗತಿ ಎಂದು ನಿಗದಿಪಡಿಸಿದ್ದ ಹುದ್ದೆಗಳಿಗೆ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿಲ್ಲ ಎಂಬ ಕಾರಣಕ್ಕೆ ಅವಕಾಶ ನಿರಾಕರಿಸಲಾಗುತ್ತಿತ್ತು. ಈ ನಿಯಮವನ್ನು ಬದಲಾವಣೆ ಮಾಡಿರುವ ಸರ್ಕಾರ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.
ಯಾವುದಾದರೂ ಹುದ್ದೆಗೆ ಏಳನೇ ತರಗತಿ ವಿದ್ಯಾರ್ಹತೆಯಾಗಿದ್ದು, ಅರ್ಜಿ ಹಾಕುವ ಅಭ್ಯರ್ಥಿ ಅಲ್ಲಿಯವರೆಗೂ ಕನ್ನಡ ಮಾಧ್ಯಮದಲ್ಲಿ ಓದಿದ್ದರೆ ಅಂತಹವರಿಗೂ ಮೀಸಲು ಸೌಲಭ್ಯ ಸಿಗಲಿದೆ.
ಹೊಸ ಸುತ್ತೋಲೆ ಅನ್ವಯ, ದೇಶದ ಯಾವುದೇ ಭಾಗದಲ್ಲಿ ಕನ್ನಡ ಮಾಧ್ಯಮದಲ್ಲಿ  1ರಿಂದ 10 ನೇ ತರಗತಿವರೆಗೆ ಓದಿದವರು ಇನ್ನು ಮುಂದೆ ಅರ್ಜಿ ಸಲ್ಲಿಸಬಹುದು. 
ಇದರಿಂದಾಗಿ ಕರ್ನಾಟಕದ ಗಡಿಯಲ್ಲಿರುವ  ಕನ್ನಡ ಶಾಲೆಗಳಲ್ಲಿ ಓದಿದ ಹೊರರಾಜ್ಯಗಳ ಕನ್ನಡಿಗರಿಗೂ ಉದ್ಯೋಗಾವಕಾಶ ಸಿಗಲಿದೆ. ಈ ಹಿಂದೆ ಕರ್ನಾಟಕದ ಶಾಲೆಗಳಲ್ಲಿ ಓದಿದವರಿಗೆ ಮಾತ್ರ ಅರ್ಜಿ ಸಲ್ಲಿಸಲು ಈ ಹಿಂದೆ ಅವಕಾಶ ಇತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT