ರಾಜ್ಯ

ಕೂಡಲಸಂಗಮದ ಅಭಿವೃದ್ಧಿಗೆ 139 ಕೋಟಿ ರೂಪಾಯಿ ವೆಚ್ಚದ ಯೋಜನೆ

ಕೂಡಲಸಂಗಮದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಯೋಜನೆ ರೂಪಿಸಿದ್ದು, 12 ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ವಿಚಾರಧಾರೆಗಳನ್ನು ಉತ್ತೇಜಿಸಿ, ಅಭಿವೃದ್ಧಿಪಡಿಸಲು ನಿರ್ಧರಿಸಿದೆ.

ಬೆಂಗಳೂರು: ಕೂಡಲಸಂಗಮದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಯೋಜನೆ ರೂಪಿಸಿದ್ದು, 12 ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ವಿಚಾರಧಾರೆಗಳನ್ನು ಉತ್ತೇಜಿಸಿ, ಅಭಿವೃದ್ಧಿಪಡಿಸಲು ನಿರ್ಧರಿಸಿದೆ. 
ದೆಹಲಿಯ ಸ್ವಾಮಿನಾರಾಯಣ ಅಕ್ಷರಧಾಮ ದೇವಾಲಯದ ಮಾದರಿಯಲ್ಲಿ ಕೂಡಲ ಸಂಗಮವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, 139 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಸಿದ್ಧಪಡಿಸಿದ್ದು, ಕೃಷ್ಣ ಭಾಗ್ಯ ಜಲ ನಿಗಮ್ ಲಿಮಿಟೆಡ್ ಮೂಲಕ ಇದನ್ನು ಜಾರಿಗೊಳಿಸಲಾಗುತ್ತದೆ. ಬಸವ ಅಂತಾರಾಷ್ಟ್ರೀಯ ಕೇಂದ್ರ, ಯಾತ್ರಾರ್ಥಿಗಳಿಗೆ ಚತ್ರ ನಿರ್ಮಿಸುವುದು, ಕಲ್ಯಾಣ ಮಂಟಪ, ಮಿನಿ ಥಿಯೇಟರ್, ವಿಜಯಪುರ ಜಿಲ್ಲೆಯ ಕೂಡಲ ಸಂಗಮದ ಬಳಿ ಓರಿಯಂಟೇಷನ್ ಸೆಂಟರ್ ನಿರ್ಮಿಸುವುದು ಯೋಜನೆಯ ಭಾಗವಾಗಿದೆ. 
ಚಿಕ್ಕಸಂಗಮದ ಬಳಿಯೂ ಇದೇ ಮಾದರಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯಲಿದ್ದು, ಚತ್ರ, ಅತಿಥಿ ಗೃಹ, ಸ್ನಾನ ಘಟ್ಟಗಳ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳು ಜಾರಿಗೆ ಬರಲಿವೆ ಎಂದು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್‌ಸೆಲ್ವಂ DMK ಸೇರ್ಪಡೆ

T20 World Cup 2026: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್‌ಗೆ ಆಘಾತ; ತಂದೆ ಖಾನ್ ಚಂದ್ ನಿಧನ!

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

SCROLL FOR NEXT