ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಣೆಗೆ ಮತ್ತೊಬ್ಬ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಬಲಿಯಾಗಿದ್ದಾರೆ.
ಶನಿವಾರ ರಾತ್ರಿ 9.50ರ ವೇಳೆಗೆ ಉಲ್ಲಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಚಿರಂಜೀವಿ ಎಂಬ 24 ವರ್ಷದ ಯುವಕನಿಗೆ ಚೂರಿಯಿಂದ ಇರಿದಿದ್ದಾರೆ. ಬೈಕ್ ನಲ್ಲಿ ಬಂದ ಮೂವರು ತಮ್ಮ ಮೇಲೆ ದಾಳಿ ನಡೆಸಿ ಚೂರಿಯಿಂದ ಇರಿದಿದ್ದಾರೆ ಎಂದು ಹೇಳಿದ್ದಾರೆ.
ಅದಕ್ಕೂ ಹಿಂದಿನ ದಿನ ಮಡಿವಾಳ ಅಂತ್ಯ ಸಂಸ್ಕಾರ ಮೆರವಣಿಗೆ ವೇಳೆ ರಿಯಾಜ್ ಎಂಬುವರಿಗೆ ಇರಿಯಲಾಗಿತ್ತು. ಬಂಟ್ವಾಳದ ಆದ್ಯಾರ್ ಕಟ್ಟೆಯಲ್ಲಿ ಶುಕ್ರವಾರ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿಯಲಾಗಿತ್ತು. ಕಳೆದ 5 ದಿನಗಳಲ್ಲಿ ಆವರ ಮೇಲೆ ಹಲ್ಲೆ ನಡೆಸಲಾಗಿದೆ.
ಶರತ್ ಮಡಿವಾಳ ಅಂತಿಮ ಸಂಸ್ಕಾರ ಮೆರವಮಿಗೆ ವೇಳೆ ಕಲ್ಲು ತೂರಾಟ ನಡೆಸಿ, ದೊಂಬಿ ನಡೆಸಿದ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಬಿ.ಸಿ ರೋಡ್ ನಲ್ಲಿ ಮೆರವಣಿಗೆ ಬರುತ್ತಿದ್ದಂತೆ ಸಮಸ್ಯೆ ಆರಂಭವಾಗಿತ್ತು.ರಿಯಾಜ್ ಗೆ ಗಾಯವಾಗಿ 7 ವಾಹನಗಳಿಗೆ ಹಾನಿ ಉಂಟು ಮಾಡಲಾಗಿತ್ತು. ಐವರನ್ನು ವಶಕ್ಕೆ ತೆಗೆದು ಕೊಂಡಿರುವ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಜುಲೈ 11 ರವರೆಗೆ ನಿಷೇದಾಜ್ಞೆ ಜಾರಿಯಲ್ಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ನಳಿನ್ ಕುಮಾರ್ ಕಟೀಲ್ ವಿರುದ್ಧ ದೂರು ದಾಖಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos