ರಾಜ್ಯ

ಮೃತ ಶರತ್ ನಿಮ್ಮ ಮಗನೆಂದು ಭಾವಿಸಿ ನಿಷ್ಪಕ್ಷಪಾತ ತನಿಖೆ ನಡೆಸಿ: ಡಿವಿ ಸದಾನಂದ ಗೌಡ ಮನವಿ

ಇತ್ತೀಚೆಗೆ ಕೊಲೆಗೀಡಾದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರನ್ನು ತಮ್ಮ ಮಗನೆಂದು ಭಾವಿಸಿ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಹೇಳಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಕೊಲೆಗೀಡಾದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರನ್ನು ತಮ್ಮ ಮಗನೆಂದು ಭಾವಿಸಿ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಹೇಳಿದ್ದಾರೆ.

ಟ್ವಿಟರ್ ನಲ್ಲಿ ಈ ಬಗ್ಗೆ ಮನವಿ ಮಾಡಿಕೊಂಡಿರುವ ಸದಾನಂದಗೌಡ ಅವರು, ಮೃತ ಶರತ್ ಮಡಿವಾಳ ಅವರ ತಂದೆಯ ರೋದನ ಮನ ಮಿಡಿಯುವಂತಿದೆ. ಶರತ್ ನನ್ನು ನಿಮ್ಮ ಮಗನೆಂದು ಭಾವಿಸಿ ಆತನ ಕೊಲೆ ಪ್ರಕರಣವನ್ನು  ನಿಷ್ಪಕ್ಷಪಾತ ತನಿಖೆ ಮಾಡಿ. ಆತನ ಕುಟುಂಬಸ್ಥರಿಗೆ ನ್ಯಾಯ ಒದಗಿಸಿ ಎಂದು ಸದಾನಂದಗೌಡ ಮನವಿ ಮಾಡಿದ್ದಾರೆ.

“ಮಾನ್ಯ @CMofKarnataka ನಾನು ನೀವು ಸಮಾನ ದುಃಖಿಗಳೆಂದು ಒಂದು ಸಂಧರ್ಭದಲ್ಲಿ ಹೇಳಿದ್ದೆ . ಮೃತಪಟ್ಟ ಆರೆಸ್ಸೆಸ್  ಕಾರ್ಯಕರ್ತನ ತಂದೆಯ ಸ್ಥಾನದಲ್ಲಿ ನಿಮ್ಮನ್ನು ಕಲ್ಪಿಸಿಕ್ಕೊಳ್ಳಿ ಮೃತ ಶರತ್ ಗೆ ನ್ಯಾಯ  ದೊರಕಿಸಿ .ಶರತ್ ನ ತಂದೆಯ ಮುಖವನ್ನು ನೆನಸಿಕೊಂಡರೆ ತುಂಬಾ ಸಂಕಟವಾಗುತ್ತಿದೆ . ನಿಮಗೇನೂ ಅನಿಸುತ್ತಿಲ್ಲವಾದರೆ ಅದನ್ನು ಯೋಜಿತ ಕೃತ್ಯವೆಂದು ತಿಳಿಯಲಾ ? ’’ ಎಂದು ಟ್ವಿಟ್ಟರ್ ನಲ್ಲಿ  ತಿಳಿಸಿದ್ದಾರೆ.

ಇತ್ತೀಚೆಗೆ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶರತ್ ರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ  ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದರು. ಶರತ್ ಶವ ಯಾತ್ರೆ ವೇಳೆ ಬಂಟ್ವಾಳದಲ್ಲಿ ವ್ಯಾಪಕ ಹಿಂಸಾಚಾರವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT