ಆಧಾರ್ 
ರಾಜ್ಯ

ಮೂವರು ಬುದ್ಧಿಮಾಂದ್ಯ ಮಕ್ಕಳು ಮತ್ತೆ ಕುಟುಂಬಂದೊಂದಿಗೆ ಸೇರಲು ನೆರವಾದ 'ಆಧಾರ್'!

ಕುಟುಂಬದಿಂದ ತಪ್ಪಿಸಿಕೊಂಡಿದ್ದ 3 ಬುದ್ಧಿಮಾಂದ್ಯ ಮಕ್ಕಳು ಮತ್ತೆ ತಮ್ಮ ಪೋಷಕರನ್ನು ಸೇರಲು ಆಧಾರ್ ನೆರವಾಗಿದೆ.

ಬೆಂಗಳೂರು: ಕುಟುಂಬದಿಂದ ತಪ್ಪಿಸಿಕೊಂಡಿದ್ದ 3 ಬುದ್ಧಿಮಾಂದ್ಯ ಮಕ್ಕಳು ಮತ್ತೆ ತಮ್ಮ ಪೋಷಕರನ್ನು ಸೇರಲು ಆಧಾರ್ ನೆರವಾಗಿದೆ. 
ಬೆಂಗಳೂರಿನಲ್ಲಿರುವ ಯುಐಡಿಎಐ ಪ್ರಾದೇಶಿಕ ಕಚೇರಿ ಅನಾಥಾಶ್ರಮಗಳಲ್ಲಿ ಆಧಾರ್ ನೋಂದಣಿ ಅಭಿಯಾನ ಪ್ರಾರಂಭಿಸಿತ್ತು. ಹೊಸೂರಿನಲ್ಲಿರುವ ಅನಾಥಾಶ್ರಮದಲ್ಲಿರುವ ಮಕ್ಕಳ ಹಿನ್ನೆಲೆಯನ್ನು ತಿಳಿದುಕೊಳ್ಳಲು ಮುಂದಾದಾಗ 3 ಬುದ್ಧಿಮಾಂದ್ಯ ಮಕ್ಕಳು ಈಗಾಗಲೇ ಆಧಾರ್ ಗೆ ನೋಂದಣಿಯಾಗಿದ್ದಾರೆ ಎಂಬ ಅಂಶ ಬಹಿರಂಗವಾಗಿದೆ. ಆಧಾರ್ ನಲ್ಲಿ ನೋಂದಣಿಯಾಗಿದ್ದ ಮೂವರು ಮಕ್ಕಳ ಪೋಷಕರ ವಿಳಾಸವನ್ನು ಪತ್ತೆ ಹಚ್ಚಿ, ಕುಟುಂಬದಿಂದ ಬೇರ್ಪಟ್ಟಿದ್ದ ಬುದ್ಧಿಮಾಂದ್ಯ ಮಕ್ಕಳನ್ನು ಪೋಷಕರೊಂದಿಗೆ ಸೇರಿಸಲಾಗಿದೆ. 
ನರೇಂದ್ರ ಎಂಬ ಬಾಲಕನನ್ನು 2016 ರ ಮೇ 21 ರಂದು ಅನಾಥಾಶ್ರಮಕ್ಕೆ ಕರೆತರಲಾಗಿತ್ತು. ಯುಐಡಿಎಐ ನೋಂದಣಿ ಅಭಿಯಾನದಲ್ಲಿ ಆತನ ಗುರುತು ಮಧ್ಯಪ್ರದೇಶದ ಇಂದೋರ್ ನಲ್ಲಿ ನೋಂದಣಿಯಾಗಿರುವುದು ತಿಳಿದುಬಂದಿದ್ದು, ಪೋಷಕರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. 
ಇನ್ನು ಓಂ ಪ್ರಕಾಶ್ ಎಂಬ ಬಾಲಕ ಸಹ ಮನೆಯಿಂದ ತಪ್ಪಿಸಿಕೊಂಡಿದ್ದು, ಆತನನ್ನೂ 21, 2016 ರಂದು ಅನಾಥಾಶ್ರಮಕ್ಕೆ ಕರೆತರಲಾಗಿತ್ತು. ಆತನ ಬಯೋಮೆಟ್ರಿಕ್ ಜಾರ್ಖಂಡ್ ನಲ್ಲಿದ್ದ ಪೋಷಕರಿಗೆ ಹೊಂದಾಣಿಕೆಯಾಗುತ್ತಿತ್ತು. ಅಂತೆಯೇ ನೀಲಕಂಠ ಎಂಬ ಬಾಲಕನ ವಿಳಾಸ ಆಂಧ್ರಪ್ರದೇಶದ ಚಿತ್ತೂರಿನಲ್ಲಿತ್ತು, ಆತನನ್ನು 2014, ಫೆ.24 ರಂದು ಸಿಸಿಐ ಗೆ ಕರೆತರಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದಿಗ್ಬಂಧನ ಉಲ್ಲಂಘಿಸಿದ ಟ್ಯಾಂಕರ್‌ ಮೇಲೆ Iran ಭೀಕರ ದಾಳಿ: ಸಮುದ್ರ ಮಧ್ಯದಲ್ಲೇ ಹೊತ್ತಿ ಉರಿದ ಹಡಗು, Hormuz ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ..!

TMC ಪಕ್ಷದ ಹೆಸರು, ಚಿಹ್ನೆ ಫ್ರೀಜ್ ಮಾಡಿದ ಚುನಾವಣಾ ಆಯೋಗ: ಉಪಚುನಾವಣೆ ಹೊತ್ತಲ್ಲೇ ದೀದಿಗೆ ಶಾಕ್‌, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ..!

ಸ್ಥಳೀಯ ಚುನಾವಣೆಗಳಿಗೆ ಕಾಂಗ್ರೆಸ್‌ ರಣತಂತ್ರ: ಜಿಲ್ಲಾಧ್ಯಕ್ಷರ ಕಾರ್ಯಕ್ಷಮತೆ ಮೇಲೆ ಹೈಕಮಾಂಡ್‌ ಕಣ್ಣು, ಬೂತ್‌ನಿಂದ ಜಿಲ್ಲಾ ಮಟ್ಟದವರೆಗೆ ಸಂಘಟನೆಗೆ ಸೂಚನೆ..!

ED ದಾಳಿ ಬೆನ್ನಲ್ಲೇ ಸತೀಶ್‌ ಜಾರಕಿಹೊಳಿ ಬೆನ್ನಿಗೆ ನಿಂತ ಎಸ್‌ಟಿ ಸಮುದಾಯ: ಬೃಹತ್‌ ಸಮಾವೇಶಕ್ಕೆ ಮುಂದು, ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು..!

ಕಾಂಗ್ರೆಸ್‌ ದೇಶವಿರೋಧಿಗಳ ಪರ, ಉಮರ್ ಖಾಲಿದ್‌ ಪರ ಹರಿಪ್ರಸಾದ್ ಹೇಳಿಕೆಗೆ ಸಂಸದ ಬೊಮ್ಮಾಯಿ ತೀವ್ರ ಕಿಡಿ