ಆಧಾರ್ 
ರಾಜ್ಯ

ಮೂವರು ಬುದ್ಧಿಮಾಂದ್ಯ ಮಕ್ಕಳು ಮತ್ತೆ ಕುಟುಂಬಂದೊಂದಿಗೆ ಸೇರಲು ನೆರವಾದ 'ಆಧಾರ್'!

ಕುಟುಂಬದಿಂದ ತಪ್ಪಿಸಿಕೊಂಡಿದ್ದ 3 ಬುದ್ಧಿಮಾಂದ್ಯ ಮಕ್ಕಳು ಮತ್ತೆ ತಮ್ಮ ಪೋಷಕರನ್ನು ಸೇರಲು ಆಧಾರ್ ನೆರವಾಗಿದೆ.

ಬೆಂಗಳೂರು: ಕುಟುಂಬದಿಂದ ತಪ್ಪಿಸಿಕೊಂಡಿದ್ದ 3 ಬುದ್ಧಿಮಾಂದ್ಯ ಮಕ್ಕಳು ಮತ್ತೆ ತಮ್ಮ ಪೋಷಕರನ್ನು ಸೇರಲು ಆಧಾರ್ ನೆರವಾಗಿದೆ. 
ಬೆಂಗಳೂರಿನಲ್ಲಿರುವ ಯುಐಡಿಎಐ ಪ್ರಾದೇಶಿಕ ಕಚೇರಿ ಅನಾಥಾಶ್ರಮಗಳಲ್ಲಿ ಆಧಾರ್ ನೋಂದಣಿ ಅಭಿಯಾನ ಪ್ರಾರಂಭಿಸಿತ್ತು. ಹೊಸೂರಿನಲ್ಲಿರುವ ಅನಾಥಾಶ್ರಮದಲ್ಲಿರುವ ಮಕ್ಕಳ ಹಿನ್ನೆಲೆಯನ್ನು ತಿಳಿದುಕೊಳ್ಳಲು ಮುಂದಾದಾಗ 3 ಬುದ್ಧಿಮಾಂದ್ಯ ಮಕ್ಕಳು ಈಗಾಗಲೇ ಆಧಾರ್ ಗೆ ನೋಂದಣಿಯಾಗಿದ್ದಾರೆ ಎಂಬ ಅಂಶ ಬಹಿರಂಗವಾಗಿದೆ. ಆಧಾರ್ ನಲ್ಲಿ ನೋಂದಣಿಯಾಗಿದ್ದ ಮೂವರು ಮಕ್ಕಳ ಪೋಷಕರ ವಿಳಾಸವನ್ನು ಪತ್ತೆ ಹಚ್ಚಿ, ಕುಟುಂಬದಿಂದ ಬೇರ್ಪಟ್ಟಿದ್ದ ಬುದ್ಧಿಮಾಂದ್ಯ ಮಕ್ಕಳನ್ನು ಪೋಷಕರೊಂದಿಗೆ ಸೇರಿಸಲಾಗಿದೆ. 
ನರೇಂದ್ರ ಎಂಬ ಬಾಲಕನನ್ನು 2016 ರ ಮೇ 21 ರಂದು ಅನಾಥಾಶ್ರಮಕ್ಕೆ ಕರೆತರಲಾಗಿತ್ತು. ಯುಐಡಿಎಐ ನೋಂದಣಿ ಅಭಿಯಾನದಲ್ಲಿ ಆತನ ಗುರುತು ಮಧ್ಯಪ್ರದೇಶದ ಇಂದೋರ್ ನಲ್ಲಿ ನೋಂದಣಿಯಾಗಿರುವುದು ತಿಳಿದುಬಂದಿದ್ದು, ಪೋಷಕರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. 
ಇನ್ನು ಓಂ ಪ್ರಕಾಶ್ ಎಂಬ ಬಾಲಕ ಸಹ ಮನೆಯಿಂದ ತಪ್ಪಿಸಿಕೊಂಡಿದ್ದು, ಆತನನ್ನೂ 21, 2016 ರಂದು ಅನಾಥಾಶ್ರಮಕ್ಕೆ ಕರೆತರಲಾಗಿತ್ತು. ಆತನ ಬಯೋಮೆಟ್ರಿಕ್ ಜಾರ್ಖಂಡ್ ನಲ್ಲಿದ್ದ ಪೋಷಕರಿಗೆ ಹೊಂದಾಣಿಕೆಯಾಗುತ್ತಿತ್ತು. ಅಂತೆಯೇ ನೀಲಕಂಠ ಎಂಬ ಬಾಲಕನ ವಿಳಾಸ ಆಂಧ್ರಪ್ರದೇಶದ ಚಿತ್ತೂರಿನಲ್ಲಿತ್ತು, ಆತನನ್ನು 2014, ಫೆ.24 ರಂದು ಸಿಸಿಐ ಗೆ ಕರೆತರಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT