ರಾಜ್ಯ

ಕರಾವಳಿ ಕೋಮು ಗಲಭೆ: ಟ್ವಿಟರ್ ನಲ್ಲಿ ಬರ್ನಿಂಗ್ ಕರ್ನಾಟಕ ಟ್ರೆಂಡ್, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಕೋಮುಗಲಭೆ ವಿರುದ್ಧ ರಾಜ್ಯಾದ್ಯಂತ ಚರ್ಚೆಯಾಗುತ್ತಿದ್ದು, ಟ್ವಿಟರ್ ನಲ್ಲಿ ಬರ್ನಿಂಗ್ ಕರ್ನಾಟಕ ಹ್ಯಾಶ್ ಟ್ಯಾಗ್ ಬಳಸಿ ರಾಜ್ಯ ಸರ್ಕಾರದ ವಿರುದ್ಧ ಟ್ವಿಟರ್ ಬಳಕೆದಾರರು...

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಕೋಮುಗಲಭೆ ವಿರುದ್ಧ ರಾಜ್ಯಾದ್ಯಂತ ಚರ್ಚೆಯಾಗುತ್ತಿದ್ದು, ಟ್ವಿಟರ್ ನಲ್ಲಿ ಬರ್ನಿಂಗ್ ಕರ್ನಾಟಕ ಹ್ಯಾಶ್ ಟ್ಯಾಗ್ ಬಳಸಿ ರಾಜ್ಯ ಸರ್ಕಾರದ ವಿರುದ್ಧ ಟ್ವಿಟರ್ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಒಂದು ವಾರದಿಂದ ನಡೆಯುತ್ತಿರುವ ಕೋಮುಗಲಭೆಯನ್ನು ನಿಯಂತ್ರಿಸಲು ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ರಾಜ್ಯ ಸರ್ಕಾರದ ವೈಫಲ್ಯವನ್ನು ಟ್ವಿಟರ್ ಬಳಕೆದಾರರು ಟೀಕಿಸಿದ್ದು, ಟ್ವಿಟಿಗರ ಜೊತೆಗೆ ಪ್ರತಿಪಕ್ಷ ಬಿಜೆಪಿಯ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರೂ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ವೈಫಲ್ಯಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಇದೇ ವೇಳೆ ಮಾಜಿ ಸಚಿವ ಸಿಟಿ ರವಿ, ಸಹ ಸಿಎಂ ವಿರುದ್ಧ ಟ್ವಿಟರ್ ನಲ್ಲಿ ಕಿಡಿ ಕಾರಿದ್ದು, ಬೌದ್ಧಿಕ ದಿವಾಳಿತನಕ್ಕೊಳಗಾದ ಮುಖ್ಯಮಂತ್ರಿಗಳ ಆಳ್ವಿಕೆಯಲ್ಲಿ ಮಾತ್ರ ಓರ್ವ ಕೊಲೆಯಾದವನಿಗೆ ಧರ್ಮ ಇರುತ್ತದೆ, ಆದರೆ ಕೊಲೆ ಮಾಡಿದ ವ್ಯಕ್ತಿಗೆ ಯಾವುದೇ ಧರ್ಮ ಇಲ್ಲದಿರುವುದು ಸಾಧ್ಯ ಎಂದಿದ್ದಾರೆ. 
ಇನ್ನು ಬಿಜೆಪಿ ನಾಯಕರ ಟ್ವೀಟ್ ಗಳಿಗೆ ಕಾಂಗ್ರೆಸ್ ಡಿಜಿಟಲ್ ಕಮ್ಯುನಿಕೇಷನ್ ನ ಸದಸ್ಯರಾಗಿರುವ ಗೌರವ್ ಪ್ರತಿಕ್ರಿಯೆ ನೀಡಿದ್ದು, ಕಾಶ್ಮೀರ, ಪಶ್ಚಿಮ ಬಂಗಾಳ, ಬಿಹಾರದ ನಂತರ ಮತ ಧೃವೀಕರಣಕ್ಕಾಗಿ ಬಿಜೆಪಿ ಕರ್ನಾಟಕವನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT