ಗದ್ದೆಯಲ್ಲಿರುವ ಹೆಜ್ಜೆ ಗುರುತುಗಳು 
ರಾಜ್ಯ

ಯಾವುದೇ ಏಲಿಯನ್ ಗಳಿಲ್ಲ: ಗದಗ ಅರಣ್ಯಾಧಿಕಾರಿಗಳ ಸ್ಪಷ್ಟನೆ!

ಇತ್ತೀಚೆಗಷ್ಟೇ ಕರ್ನಾಟಕದ ಗದಗ ಜಿಲ್ಲೆಯಲ್ಲಿ ಏಲಿಯನ್ ಗಳು ಆಗಮಿಸಿ ಭೀತಿ ಹುಟ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಗ್ರಾಮದಲ್ಲಿ ಯಾವುದೇ ರೀತಿಯ ಏಲಿಯನ್ ಗಳಿಲ್ಲ ಎಂದು ಹೇಳಿದ್ದಾರೆ.

ಗದಗ: ಇತ್ತೀಚೆಗಷ್ಟೇ ಕರ್ನಾಟಕದ ಗದಗ ಜಿಲ್ಲೆಯಲ್ಲಿ ಏಲಿಯನ್ ಗಳು ಆಗಮಿಸಿ ಭೀತಿ ಹುಟ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಗ್ರಾಮದಲ್ಲಿ ಯಾವುದೇ ರೀತಿಯ ಏಲಿಯನ್ ಗಳಿಲ್ಲ ಎಂದು  ಹೇಳಿದ್ದಾರೆ.

ಕಳೆದ ಭಾನುವಾರ ರಾತ್ರಿ ಕರ್ನಾಟಕದ ಗದಗ ಜಿಲ್ಲೆಯ ಸಮೀಪದ ಅಂಟೂರು ಗ್ರಾಮದಲ್ಲಿ ಏಲಿಯನ್ ಗಳು ಆಗಮಿಸಿದ್ದವು ಎಂಬ ಸುದ್ದಿ ಹಾರಿದಾಡುತ್ತಿತ್ತು. ಇದಕ್ಕೆ ಇಂಬು ನೀಡುವಂತೆ ಗ್ರಾಮದ ಸಮೀಪದ ಗದ್ದೆಗಳಲ್ಲಿ ಬೃಹತ್  ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಈ ಹೆಜ್ಜೆ ಗುರುತುಗಳು ಏಲಿಯನ್ ಗಳದ್ದೇ ಎಂಬ ಮಾತು ಕೂಡ ಕೇಳಿಬರುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ರಾತ್ರಿ ಪೂರ್ತಿ ಘಟನಾ ಸ್ಥಳದಲ್ಲಿ ಶೋಧ ನಡೆಸಿದ ಅಧಿಕಾರಿಗಳು  ಬೆಳಗ್ಗೆ ಸ್ಪಷ್ಟನೆ ನೀಡಿ ಯಾವುದೇ ರೀತಿಯ ಏಲಿಯನ್ ಗಳು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ರಾತ್ರಿ ಇಡೀ ತಾವು ಶೋಧ ನಡೆಸಿದ್ದು, ಈ ವೇಳೆ ಯಾವುದೇ ರೀತಿಯ ಶಂಕಾಸ್ಪದ ಪ್ರಾಣಿಯಾಗಲಿ ಅನುಮಾನಾಸ್ಪದ ಶಬ್ದಗಳಾಗಲಿ ಕೇಳಿ ಬಂದಿಲ್ಲ ಎಂದು ಹೇಳಿದ್ದಾರೆ.

ಆದರೆ ಅರಣ್ಯಾಧಿಕಾರಿಗಳ ಸ್ಪಷ್ಟನೆ ಬಳಿಕವೂ ಗ್ರಾಮದಲ್ಲಿ ಭಯದ ವಾತಾವರಣವಿದ್ದು, ಅಧಿಕಾರಿಗಳ ಮಾತನ್ನು ಗ್ರಾಮಸ್ಥರು ನಂಬುತ್ತಿಲ್ಲ ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಯ ಪ್ರಕಾಶ್ ನಾಗರೆಡ್ಡಿ  ಎಂಬುವವರು, ಸಮೀಪದ ಹೊಲಗಳಲ್ಲಿ ಬೃಹತ್ ಹೆಜ್ಜೆ ಗುರುತುಗಳ ಪತ್ತೆಯಾಗಿವೆ. ಇದು ಕಿಡಿಗೇಡಿ ಕೃತ್ಯವೇ ಎಂದು ಹೇಳುವುದಾದರೆ, ಅಷ್ಟು ಬೃಹತ್ ಹೆಜ್ಜೆ ಗುರುತುಗಳನ್ನು ಸೃಷ್ಟಿಸಲು ಸಾಧ್ಯವೇ ಇಲ್ಲ,. ಅದೂ ಕೂಡ ಸುಮಾರು 2  ಕಿ.ಮೀ ದೂರದವರೆಗೂ ಹೆಜ್ಜೆ ಗುರುತುಗಳು ಪತ್ತೆಯಾಗಿವೆ.

ನಾವೇ ಬೇಕೆಂದು ಹಣ ನೀಡಿ ಕೂಲಿಯವರಿಂದ ಈ ಹೆಜ್ಜೆ ಗುರುತುಗಳನ್ನು ಹಾಕಿಸಿದರೂ ಅಷ್ಟು ನಿಖರವಾಗಿ ಒಂದೇ ರಾತ್ರಿಯಲ್ಲಿ ಅಷ್ಟು ದೂರದವರೆಗೆ ಹೆಜ್ಜೆ ಗುರುತು ಸೃಷ್ಟಿಸಲು ಅಸಾಧ್ಯ ಎಂದು ಭೀತಿ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT