ಸಾಂದರ್ಭಿಕ ಚಿತ್ರ 
ರಾಜ್ಯ

ಕುಡಿದ ಮತ್ತಿನಲ್ಲಿ ಚಾಲನೆ: ಬೆಂಗಳೂರಿನಲ್ಲಿ ಸರಣಿ ಅಪಘಾತ, ಹಲವರಿಗೆ ಗಾಯ

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಪರಿಣಾಮ ಸರಣಿ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಚಂದ್ರಾ ಲೇಔಟ್ ಸಮೀಪದ ...

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಪರಿಣಾಮ ಸರಣಿ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಚಂದ್ರಾ ಲೇಔಟ್ ಸಮೀಪದ ಬ್ಯಾಟರಾಯನಪುದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಉದಯ್ ಎಂಬಾತ ಟ್ರಾವೆಲ್ ಎಜೆನ್ಸಿಗೆ ಸೇರಿದ ಇನ್ನೋವಾ ಕಾರು ಡ್ರೈವಿಂಗ್ ಮಾಡಿ ನಾಲ್ಕು ವಾಹನಗಳಿಗೆ ಹಾನಿ ಉಂಟು ಮಾಡಿದ್ದಾನೆ.
ಅಪಘಾತದಿಂದ ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. 
ರಾತ್ರಿ ಸುಮಾರು 11.30 ರ ವೇಳೆಗೆ ಈ ಘಟನೆ ಸಂಭವಿಸಿದೆ. ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಉದಯ್ ಆಟೋಗೆ ಡಿಕ್ಕಿ ಹೊಡೆದಿದ್ದಾನೆ, ಅದಕ್ಕೂ ಮುನ್ನ ರಸ್ತೆ ಬದಿಯಲ್ಲಿದ್ದ ಪಾನ್ ಬೀಡಾ ಅಂಗಡಿಗೆ ಗುದ್ದಿದ್ದಾನೆ, ಈ ವೇಳೆ ಬೈಕ್ ಸವಾರರು ಗಾಯಗೊಂಡಿದ್ದು, ಆಟೋ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದಯ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ಆತ ಮದ್ಯ ಸೇವಿಸಿದ್ದ ಎಂಬುದು ದೃಢ ಪಟ್ಟಿದೆ. ಗಾಯಾಳುಗಳನ್ನು ವಿಜಯನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಯಾಣಿಕರನ್ನು ಅವರ ಸ್ಥಳಕ್ಕೆ ಬಿಟ್ಟಪ ವಾಟರ್ ಟ್ಯಾಂಕ್ ರಸ್ತೆಯಲ್ಲಿ ಮಾಗಡಿ ರಸ್ತೆಯಲ್ಲಿರುವ ನನ್ನ ಮನೆ ಕಡೆ ಹೋಗುತ್ತಿದ್ದೆ, ಈ ವೇಳೆ ಕಾರು ಬಂದು ನನ್ನ ಆಟೋಗೆ ಡಿಕ್ಕಿ ಹೊಡೆಯಿತು, ಇದರಿಂದ ನಾನು ಪ್ರಜ್ಞೆ ಕಳೆದು ಕೊಂಡೆ , ಸ್ವಲ್ಪ ಸಮಯದ ನಂತರ ನನಗೆ ಏನಾಯಿತು ಎಂಬುದರ ಬಗ್ಗೆ ತಿಳಿಯಿತು ಎಂದು ಸುರೇಶ್ ಎಂಬ ಆಟೋ ಚಾಲಕ ಘಟನೆ ಬಗ್ಗೆ ವಿವರಿಸಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT