ಸಾಂದರ್ಭಿಕ ಚಿತ್ರ 
ರಾಜ್ಯ

ಕುಡಿದ ಮತ್ತಿನಲ್ಲಿ ಚಾಲನೆ: ಬೆಂಗಳೂರಿನಲ್ಲಿ ಸರಣಿ ಅಪಘಾತ, ಹಲವರಿಗೆ ಗಾಯ

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಪರಿಣಾಮ ಸರಣಿ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಚಂದ್ರಾ ಲೇಔಟ್ ಸಮೀಪದ ...

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಪರಿಣಾಮ ಸರಣಿ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಚಂದ್ರಾ ಲೇಔಟ್ ಸಮೀಪದ ಬ್ಯಾಟರಾಯನಪುದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಉದಯ್ ಎಂಬಾತ ಟ್ರಾವೆಲ್ ಎಜೆನ್ಸಿಗೆ ಸೇರಿದ ಇನ್ನೋವಾ ಕಾರು ಡ್ರೈವಿಂಗ್ ಮಾಡಿ ನಾಲ್ಕು ವಾಹನಗಳಿಗೆ ಹಾನಿ ಉಂಟು ಮಾಡಿದ್ದಾನೆ.
ಅಪಘಾತದಿಂದ ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. 
ರಾತ್ರಿ ಸುಮಾರು 11.30 ರ ವೇಳೆಗೆ ಈ ಘಟನೆ ಸಂಭವಿಸಿದೆ. ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಉದಯ್ ಆಟೋಗೆ ಡಿಕ್ಕಿ ಹೊಡೆದಿದ್ದಾನೆ, ಅದಕ್ಕೂ ಮುನ್ನ ರಸ್ತೆ ಬದಿಯಲ್ಲಿದ್ದ ಪಾನ್ ಬೀಡಾ ಅಂಗಡಿಗೆ ಗುದ್ದಿದ್ದಾನೆ, ಈ ವೇಳೆ ಬೈಕ್ ಸವಾರರು ಗಾಯಗೊಂಡಿದ್ದು, ಆಟೋ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದಯ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ಆತ ಮದ್ಯ ಸೇವಿಸಿದ್ದ ಎಂಬುದು ದೃಢ ಪಟ್ಟಿದೆ. ಗಾಯಾಳುಗಳನ್ನು ವಿಜಯನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಯಾಣಿಕರನ್ನು ಅವರ ಸ್ಥಳಕ್ಕೆ ಬಿಟ್ಟಪ ವಾಟರ್ ಟ್ಯಾಂಕ್ ರಸ್ತೆಯಲ್ಲಿ ಮಾಗಡಿ ರಸ್ತೆಯಲ್ಲಿರುವ ನನ್ನ ಮನೆ ಕಡೆ ಹೋಗುತ್ತಿದ್ದೆ, ಈ ವೇಳೆ ಕಾರು ಬಂದು ನನ್ನ ಆಟೋಗೆ ಡಿಕ್ಕಿ ಹೊಡೆಯಿತು, ಇದರಿಂದ ನಾನು ಪ್ರಜ್ಞೆ ಕಳೆದು ಕೊಂಡೆ , ಸ್ವಲ್ಪ ಸಮಯದ ನಂತರ ನನಗೆ ಏನಾಯಿತು ಎಂಬುದರ ಬಗ್ಗೆ ತಿಳಿಯಿತು ಎಂದು ಸುರೇಶ್ ಎಂಬ ಆಟೋ ಚಾಲಕ ಘಟನೆ ಬಗ್ಗೆ ವಿವರಿಸಿದ್ದಾನೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT