ಸಾಂದರ್ಭಿಕ ಚಿತ್ರ 
ರಾಜ್ಯ

ಪತ್ನಿ, ಮಗಳ ಎದುರೇ ತಲೆಗೆ ಗುಂಡು ಹಾರಿಸಿಕೊಂಡ ಹಾವೇರಿ ಉದ್ಯಮಿ!

ವ್ಯಾಪಾರದಲ್ಲಿನ ವ್ಯಾಪಕ ನಷ್ಟ ಉಂಟಾಯಿತು ಎಂದು ನೊಂದ ಉಧ್ಯಮಿಯೋರ್ವ ತನ್ನ ಪತ್ನಿ ಮತ್ತು ಮಗಳ ಎದುರೇ ತಲೆಗೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿರುವ ಧಾರುಣ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿ: ವ್ಯಾಪಾರದಲ್ಲಿನ ವ್ಯಾಪಕ ನಷ್ಟ ಉಂಟಾಯಿತು ಎಂದು ನೊಂದ ಉಧ್ಯಮಿಯೋರ್ವ ತನ್ನ ಪತ್ನಿ ಮತ್ತು ಮಗಳ ಎದುರೇ ತಲೆಗೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿರುವ ಧಾರುಣ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ ಉಧ್ಯಮ ದೊಡ್ಡ ಕೊಟ್ರೇಶಯ್ಯ ಸುತ್ತಿನಭಾವಿಮಠ (52 ವರ್ಷ) ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಸಾವಿಗೆ ವ್ಯಾಪಾರದಲ್ಲಿನ ನಷ್ಟವೇ ಕಾರಣ ಎಂದು ಹೇಳಲಾಗುತ್ತಿದೆ. ರಾಣೆ  ಬೆನ್ನೂರಿನ ಸರ್ಕಾರಿ ಬಸ್ ನಿಲ್ದಾಣದ ಹಿಂಭಾಗದಲ್ಲೇ ದೊಡ್ಡ ಕೊಟ್ರೇಶಯ್ಯ ನಿವಾಸವಿದ್ದು, ತಮ್ಮ ನಿವಾಸದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ತಮ್ಮ ವ್ಯಾಪಾರದಲ್ಲಿ ದೊಡ್ಡ ಕೊಟ್ರೇಶಯ್ಯ ಸಾಕಷ್ಟು ನಷ್ಟ ಅನುಭವಿಸಿದ್ದರು. ಅಲ್ಲದೆ ಸಾಕಷ್ಟು ಸಾಲ ಕೂಡ ಮಾಡಿಕೊಂಡಿದ್ದರು. ಈ ಸಾಲ ತೀರಿಸುವ ಸಲುವಾಗಿ ದೊಡ್ಡ ಕೊಟ್ರೇಶಯ್ಯ ತಮ್ಮ ಮಾಲೀಕತ್ವದ  ಭೂಮಿಯನ್ನು ಕೂಡ ಮಾರಿದ್ದರು ಎಂದು ತಿಳಿದುಬಂದಿದೆ. ಇದೀಗ ತಮ್ಮಗೇ ಪರವಾನಗಿ ಇರುವ ಪಿಸ್ತೂಲಿನಿಂದ ದೊಡ್ಡ ಕೊಟ್ರೇಶಯ್ಯ ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಸ್ತುತ ರಾಣೆ ಬೆನ್ನೂರು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದೊಡ್ಡ ಕೊಟ್ರೇಶಯ್ಯ ಅವರಿಗೆ ಇಬ್ಬರು ಪುತ್ರಿಯರಿದ್ದು, ಈ ಪೈಕಿ ದೊಡ್ಡ ಮಗಳಿಗೆ ಮದುವೆಯಾಗಿದ್ದು, ಆಕೆ  ಮೂಡಬಿದಿರೆಯಲ್ಲಿ ವಾಸಿಸುತ್ತಿದ್ದಾರೆ. ಕಿರಿಯ ಪುತ್ರಿ ಕಾಲೇಜು ವಿದ್ಯಾರ್ಥಿನಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT