ಸಿದ್ದರಾಮಯ್ಯ 
ರಾಜ್ಯ

ಜನತಾ ದರ್ಶನದಲ್ಲಿ ಕಾಯಿಲೆಯಿಂದ ಬಳಲುತ್ತದ್ದ ವೃದ್ಧನಿಗೆ ಸಿಎಂ ಸಿದ್ದರಾಮಯ್ಯ ಧನಸಹಾಯ

ಕಾಲು ನೋವಿನಿಂದ ಬಳಲುತ್ತಿದ್ದ ವೃದ್ಧನೋರ್ವನಿಗೆ ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪಾಕೆಟ್ ನಲ್ಲಿದ್ದ ಹಣ ನೀಡಿ ಸಹಾಯ ಮಾಡಿದ್ದಾರೆ..

ಬೆಂಗಳೂರು: ಕಾಲು ನೋವಿನಿಂದ ಬಳಲುತ್ತಿದ್ದ ವೃದ್ಧನೋರ್ವನಿಗೆ ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪಾಕೆಟ್ ನಲ್ಲಿದ್ದ ಹಣ ನೀಡಿ ಸಹಾಯ ಮಾಡಿದ್ದಾರೆ.
ಬುಧವಾರ ಬೆಳಗ್ಗೆ  ತಮ್ಮ ನಿವಾಸದಲ್ಲಿ ಸುಮಾರು 100 ಮಂದಿಯನ್ನು ಸಿಎಂ ಜನತಾ ದರ್ಶನದಲ್ಲಿ ಭೇಟಿ ಮಾಡಿದರು. ಈ ವೇಳೆ 70 ವರ್ಷದ ವೃದ್ಧನೋರ್ವ ನೋವಿನಿಂದ ಬಳಲುತ್ತಿದ್ದದ್ದನ್ನು ಗಮನಿಸಿದ ಸಿಎಂ ಆತನಿಗೆ ಸಹಾಯ ಮಾಡಿದ್ದಾರೆ.
ಕಾಲಿನ ಅಲರ್ಜಿಯಿಂದ ಬಳಲುತ್ತಿದ್ದ ವ್ಯಕ್ತಿಗೆ ಆಯುರ್ವೇದ ಚಿಕಿತ್ಸೆಯ ಅವಶ್ಯಕತೆಯಿದ್ದು, ಕಳೆದ ಶನಿವಾರವೂ ಸಿಎಂ ನೋಡಲು ಬಂದಿದ್ದರು. ಆದರೆ  ಸಾಧ್ಯವಾಗಿರಲಿಲ್ಲ, ಈ ವೇಳೆ ತಮ್ಮ ಪರ್ಸ್ ನಲ್ಲಿದ್ದ 7.500 ರು ಹಣವನ್ನು ಆತನಿಗೆ ನೀಡಿ, ಆರೋಗ್ಯವೇ ಬಹಳ ಮುಖ್ಯವಾದದ್ದು, ಯಾವತ್ತೂ ಅದನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT