ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ: ಸೈನೈಡ್ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶಿರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಬೆಳ್ಳೆಯಲ್ಲಿ...

ಉಡುಪಿ : ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ  ಶಿರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಬೆಳ್ಳೆಯಲ್ಲಿ ನಡೆದಿದೆ.
ಶಂಕರ ಆಚಾರ್ಯ(51) ಪತ್ನಿ ನಿರ್ಮಲ ಆಚಾರ್ಯ( 45) ಮಕ್ಕಳಾದ ಶ್ರುತಿ(25) ಮತ್ತು ಶ್ರೇಯ( 22) ಆತ್ಮಹತ್ಯೆಗೆ ಶರಣಾದವರು. 
ಶಂಕರ್ ಆಚಾರ್ಯ ಅವರು ಪಡುಬೆಳ್ಳೆಯಲ್ಲಿ ಚಿನ್ನದ ಅಂಗಡಿ ನಡೆಸುತ್ತಿದ್ದರು. ಶೃತಿ ಎಂಬಿಎ ಪಧವೀಧರೆಯಾಗಿದ್ದು, ಶ್ರೇಯಾ ಎಂಸಿಎ ಓದುತ್ತಿದ್ದಳು. 
ಪಕ್ಕದ ಮನೆಯಲ್ಲಿ ವಾಸವಿದ್ದ ಸಂಬಂದಿಗಳಿಂದ ಪ್ರಕರಣ ಬಯಲಾಗಿದ್ದು, ಕಸ್ತೂರ ಬಾ ಆಸ್ಪತ್ರೆಗೆ ಶವಗಳನ್ನು  ರವಾನಿಸಲಾಗಿದೆ.
ಶೃತಿಗೆ ವಿವಾಹ ನಿಶ್ಚಯವಾಗಿದ್ದು, ಸೆಪ್ಟಂಬರ್ 5 ರಂದು ದಿನಾಂಕ ನಿಗದಿಯಾಗಿತ್ತು. ಗುರುವಾರ ಅವರು ಮದುವೆಗಾಗಿ ಛತ್ರ ಬುಕ್ ಮಾಡಿಸಲು ಯೋಜಿಸಿದ್ದರು. ವಿಷವನ್ನು ಆಹಾರದಲ್ಲಿ ಬೆರೆಸಿ ತಿಂದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತರ ಮನೆಯಲ್ಲಿ ಅನ್ನ ಸಾರು ಇದ್ದ ತಟ್ಟೆ ಪತ್ತೆಯಾಗಿದೆ. ಬೆಳಗ್ಗೆ 6 ರಿಂದ 8 ಗಂಟೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ, ಯಾವುದೇ ಡೆತ್ ನೋಟ್ ಕೂಡ ಪತ್ತೆಯಾಗಿಲ್ಲ, ಈ ಸಂಬಂಧ  ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT