ಶಶಿಕಲಾ 
ರಾಜ್ಯ

ಬೆಂಗಳೂರು: ಕೇಂದ್ರ ಕಾರಾಗೃಹದಲ್ಲಿ ಚಿನ್ನಮ್ಮನ ರಾಜ ದರ್ಬಾರ್

ಪರಪ್ಪನ ಅಗ್ರಹಾರದಲ್ಲಿರುವ ಜೈಲು ಅಧಿಕಾರಿಯ ಅಧಿಕೃತ ಕೊಠಡಿ ಎಐಎಡಿಎಂಕೆ ನಾಯಕಿ ಶಶಿಕಲಾ ನೋಡಲು ಬರುವ ವಿಸಿಟರ್ಸ್ ಗಳ ಅತಿಥಿ ...

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿರುವ ಜೈಲು ಅಧಿಕಾರಿಯ ಅಧಿಕೃತ ಕೊಠಡಿ ಎಐಎಡಿಎಂಕೆ  ನಾಯಕಿ ಶಶಿಕಲಾ ನೋಡಲು ಬರುವ ವಿಸಿಟರ್ಸ್ ಗಳ ಅತಿಥಿ ಗೃಹವಾಗಿದೆ ಎಂದು ಉನ್ನತ ಮೂಲಗಳ ಮಾಹಿತಿಯಿಂದ ತಿಳಿದು ಬಂದಿದೆ.
ಈ ಕೊಠಡಿಯಲ್ಲಿ 8 ಕುರ್ಚಿಗಳಿದ್ದು, ಶಶಿಕಲಾ ಭೇಟಿ ಮಾಡಲು ಬರುವ ಉನ್ನತ ವ್ಯಕ್ತಿಗಳ ಮೀಟಿಂಗ್ ಹಾಲ್ ಆಗಿ ಪರಿವರ್ತಿತವಾಗಿದೆ. ಈ ಕೊಠಡಿಯನ್ನು ಬಳಸುತ್ತಿದ್ದ ಅಧಿಕಾರಿ ಇತ್ತೀಚೆಗೆ ನಿವೃತ್ತರಾದ ಹಿನ್ನೆಲೆಯಲ್ಲಿ, ಅದನ್ನು ಮೀಟಿಂಗ್ ಹಾಲ್ ಆಗಿ ಬದಲಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಕೊಠಡಿಯಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ, ಜೊತೆಗೆ ಕೊಠಡಿ ಹೊರಗೆ ಭದ್ರತಾ ಸಿಬ್ಬಂದಿಯೂ ಇರುವುದಿಲ್ಲ, ಪ್ರತಿದಿನ ಶಶಿಕಲಾರನ್ನು ನೋಡಲು ಹಲವರು ಬರುತ್ತಾರೆ. ಅದರಲ್ಲಿ ತಮಿಳುನಾಡಿನ ಪ್ರಮುಖ ಸಚಿವರು ಹಾಗೂ ಗಣ್ಯ ರಾಜಕಾರಣಿಗಳು ಇರುತ್ತಾರೆ.
ಜೈಲಿನಲ್ಲಿರುವ ಕೈದಿಗಳನ್ನು ಭೇಟಿ ಮಾಡಲು ಬಂದಾಗ ಅಲ್ಲಿ ಒಂದು ಜಾಲರಿ(ಮೆಸ್) ಇರುತ್ತದೆ. ಕೈದಿಗಳು ಮತ್ತು ವಿಸಿಟರ್ಸ್ ಪರಸ್ಪರ ನೇರವಾಗಿ ಭೇಟಿಯಾಗಲು ಸಾಧ್ಯವಿಲ್ಲ, ಆದರೆ ಶಶಿಕಲಾ ಭೇಟಿ ಮಾಡಲು ವ್ಯವಸ್ಥೆಯಾಗಿರುವ ಕೊಠಡಿಯಲ್ಲಿ ಅಂತ ಸಮಸ್ಯೆಯಿಲ್ಲ ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT