ಸಾಂದರ್ಭಿಕ ಚಿತ್ರ 
ರಾಜ್ಯ

ಎಲ್ಲಾ ಶಾಲೆಗಳಲ್ಲೂ ನಾಡಗೀತೆ ಹಾಡುವುದು ಕಡ್ಡಾಯ: ಶೀಘ್ರವೇ ಅಧಿಸೂಚನೆ

ರಾಜ್ಯದ ಎಲ್ಲಾ ಶಾಲೆಗಳಲ್ಲೂ ಅಂದರೆ ಸಿಬಿಎಸ್ ಸಿ ಮತ್ತು ಐಸಿಎಸ್ ಸಿ ಮಾನ್ಯತೆ ಪಡೆದ ಶಾಲೆಗಳಲ್ಲೂ ನಾಡಗೀತೆ ಹಾಡುವು ಕಡ್ಡಾಯ ಎಂಬ ಆದೇಶ ಶೀಘ್ರವೇ ...

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲೂ ಅಂದರೆ ಸಿಬಿಎಸ್ ಸಿ ಮತ್ತು ಐಸಿಎಸ್ ಸಿ ಮಾನ್ಯತೆ ಪಡೆದ ಶಾಲೆಗಳಲ್ಲೂ ನಾಡಗೀತೆ ಹಾಡುವು ಕಡ್ಡಾಯ ಎಂಬ ಆದೇಶ ಶೀಘ್ರವೇ ಹೊರಡಲಿದೆ.
ಹಲವು ಖಾಸಗಿ ಶಾಲೆಗಳಲ್ಲಿ ಬೆಳಗ್ಗಿನ ಅಸೆಂಬ್ಲಿ ವೇಳೆ ಮಕ್ಕಳಿಂದ ನಾಡಗೀತೆ ಹಾಡಿಸುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ಈ ಸಂಬಂಧ ಶೀಘ್ರವೇ ಇಲಾಖೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಕೆಲ ಶಾಲೆಗಳಲ್ಲಿ ಅಸೆಂಬ್ಲಿ ವೇಳೆ ಕೇವಲ ರಾಷ್ಟ್ರಗೀತೆ ಮತ್ತು ಕೆಲವೊಂದು ಶ್ಲೋಕ ಮತ್ತು ಶಾಲೆಯ ಗೀತೆಗಳನ್ನು ಹಾಡಿಸಲಾಗುತ್ತಿದೆ, ಮಕ್ಕಳಿಗೆ ನಾಡಗೀತೆಯನ್ನು ಹಾಡಿಸುತ್ತಿಲ್ಲ ಎಂದು ಪೋಷಕರು  ದೂರು ನೀಡಿದ್ದಾರೆ ಎಂದು ತನ್ವೀರ್ ಸೇಠ್ ತಿಳಿಸಿದ್ದಾರೆ. 
ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಅಂತಿಮ ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ಕೂಡಲೇ ಎಲ್ಲಾ ಶಾಲೆಗಳಿಗೂ ಸುತ್ತೋಲೆ ಹೊರಡಿಸುವುದಾಗಿ ಹೇಳಿದ ಅವರು, ನಾಡಗೀತೆಯ ಪ್ರತಿಯೊಂದು ಸಾಲನ್ನು ತಪ್ಪುಗಳಿಲ್ಲದೇ ಹಾಡಬೇಕಿದೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳ ಪ್ರಕಾರ ನಾಡಗೀತೆ ಕಡ್ಡಾಯವಾಗಿ ಹಾಡಬೇಕು ಎಂಬುದು ಜಾರಿಯಾಗಿದೆ. ಆದರೆ ಕೆಲ ಖಾಸಗಿ ಶಾಲೆಗಳಲ್ಲಿ ಪಾಲಿಸುತ್ತಿಲ್ಲ. ಹೀಗಾಗಿ ಇಲಾಖೆ ಬೊಸ ಸುತ್ತೊಲೆ ಹೊರಡಿಸಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT