ಬೆಂಗಳೂರು ಮತ್ತು ಮೈಸೂರು ವಿಶ್ವವಿದ್ಯಾಲಯ 
ರಾಜ್ಯ

ಕೊನೆಗೂ ಬೆಂಗಳೂರು, ಮೈಸೂರು ವಿಶ್ವವಿದ್ಯಾಲಯಕ್ಕೆ ಖಾಯಂ ಉಪ ಕುಲಪತಿಗಳ ನೇಮಕ

ಸುಮಾರು 6 ತಿಂಗಳ ಬಳಿಕ ಬೆಂಗಳೂರು ಮತ್ತು ಮೈಸೂರು ವಿಶ್ವವಿದ್ಯಾಲಯಗಳಿಗೆ ಖಾಯಂ ಉಪ ಕುಲ...

ಬೆಂಗಳೂರು: ಸುಮಾರು 6 ತಿಂಗಳ ಬಳಿಕ ಬೆಂಗಳೂರು ಮತ್ತು ಮೈಸೂರು ವಿಶ್ವವಿದ್ಯಾಲಯಗಳಿಗೆ ಖಾಯಂ ಉಪ ಕುಲಪತಿಗಳ ನೇಮಕವಾಗಲಿದೆ.
ಮೊನ್ನೆ ಶುಕ್ರವಾರ ಸಂಜೆ ಉಪ ಕುಲಪತಿಗಳ ಹೆಸರಿನ ಶಿಫಾರಸು ಪತ್ರ ಮುಖ್ಯಮಂತ್ರಿ ಕಚೇರಿಯಿಂದ ಅಂಕಿತಕ್ಕೆ ರಾಜಭವನಕ್ಕೆ ತಲುಪಿದೆ. ರಾಜಭವನದ ಮೂಲಗಳ ಪ್ರಕಾರ, ಎರಡೂ ವಿಶ್ವವಿದ್ಯಾಲಯಗಳಿಗೆ ಹೊಸ ಉಪ ಕುಲಪತಿಗಳ ನೇಮಕಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಆದೇಶವನ್ನು ಹೊರಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಉಪ ಕುಲಪತಿ ನೇಮಕಕ್ಕೆ ಶೋಧನಾ ಸಮಿತಿ ಶಿಫಾರಸು ಮಾಡಿದ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಸಂಗಮೇಶ್ ಪಾಟೀಲ್ ಅವರನ್ನು ನೇಮಕ ಮಾಡಲು ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ. ಇನ್ನು ಮೈಸೂರು ವಿಶ್ವವಿದ್ಯಾಲಯಕ್ಕೆ ಅದೇ ವಿ.ವಿಯ ಕನ್ನಡ ಪ್ರಾಧ್ಯಾಪಕ ಪ್ರೊ.ಸಿದ್ದಶ್ರಾಮ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT