ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಡಿಐಜಿ ವರ್ಗಾವಣೆ: ಪ್ರತಿಯೊಂದನ್ನು ಮಾಧ್ಯಮದ ಮುಂದೆ ಬಹಿರಂಗಪಡಿಸುವ ಅಗತ್ಯವಿಲ್ಲ- ಸಿಎಂ ಸಿದ್ದರಾಮಯ್ಯ

ಪ್ರತಿಯೊಂದನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಬೇಕೆಂಬ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ...

ಬೆಂಗಳೂರು: ಪ್ರತಿಯೊಂದನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಬೇಕೆಂಬ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. 
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಐಜಿ ಡಿ. ರೂಪಾ ವರ್ಗಾವಣೆ ಮಾಡಿರುವ ನಿರ್ಧಾರದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಇದೊಂದು ಆಡಳಿತಾತ್ಮಕ ಪ್ರಕ್ರಿಯೆಯಾಗಿದ್ದು, ಪ್ರತಿಯೊಂದನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. 
ಇದೇ ವೇಳೆ ರಾಜ್ಯ ಕಾನೂನು ಸಚಿವ ಟಿ.ಬಿ. ಜಯಚಂದ್ರ ಮಾತನಾಡಿ, ವರ್ಗಾವಣೆ ಕುರಿತು ನನಗೆ ಮಾಹಿತಿಯಿಲ್ಲ. ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮವನ್ನು ಎದುರಿಸಲೇಬೇಕು ಎಂದು ಹೇಳಿದ್ದಾರೆ. 
ಅಧಿಕಾರಗಳನ್ನು ವರ್ಗಾವಣೆ ಮಾಡಲಾಗಿದೆಯೇ ಅಥವಾ ಇಲ್ಲವೋ ಎಂಬುದರ ಬಗ್ಗೆ ನನಗೆ ಮಾಹಿತಿಯಿಲ್ಲ. ಈಗಾಗಲೇ ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದೆ. ತನಿಖೆ ಸಂಪೂರ್ಣಗೊಳ್ಳಲಿ. ವರದಿ ಬಂದ ಬಳಿಕ ಡಿಐಜಿ ಅಥವಾ ಡಿಜಿಪಿಯೇ ಆಗಲೀ, ಯಾರೇ ಮಿತಿ ಮೀರಿದ್ದರೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹದ ಇಬ್ಬರು ಹಿರಿಯ ಅಧಿಕಾರಿಗಳು ಇತ್ತೀಚೆಗೆ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದರು. ಇದರಂತೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಂಡಿರುವ ರಾಜ್ಯ ಸರ್ಕಾರ ರೂಪಾ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ಡಿಐಜಿಯಾಗಿ ವರ್ಗಾವಣೆ ಮಾಡಿದೆ. ಸತ್ಯನಾರಾಯಣ ರಾವ್ ಅವರಿಗೆ ಯಾವುದೇ ಸ್ಥಾನವನ್ನು ನೀಡದೆ ಕಾರಾಗೃಹ ಡಿಜಿ ಸ್ಥಾನದಿಂದ ತೆರವುಗೊಳಿಸಿದೆ. ಸತ್ಯನಾರಾಯಣ ಅವರ ನಿವೃತ್ತಿಗೆ ಇನ್ನು ಕೆಲವೇ ದಿನಗಳು ಬಾಕಿಯಿರುವಾಗಲೇ ತಾತ್ಕಾಲಿಕವಾಗಿ ಸೇವೆಯಿಂದ ಮುಕ್ತಿಗೊಳಿಸಲಾಗಿದೆ. ಮುಖ್ಯಮಂತ್ರಿ ಸ್ಥಾನದೊಂದಿಗೆ ಗೃಹ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT