ಸಿದ್ದರಾಮಯ್ಯ 
ರಾಜ್ಯ

ರಾಜ್ಯಕ್ಕೆ ಪ್ರತ್ಯೇಕ ಧ್ವಜ: 9 ಸದಸ್ಯರ ಸಮಿತಿ ರಚಿಸಿದ ಸಿಎಂ ಸಿದ್ದರಾಮಯ್ಯ

ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ....

ನವದೆಹಲಿ: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಪ್ರತ್ಯೇಕ ಧ್ವಜದ ವಿನ್ಯಾಸ ರಚಿಸಲು 9 ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದೆ.
ಸಂವಿಧಾನದ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಹೊಂದಿರುವ ಜಮ್ಮು ಮತ್ತು ಕಾಶ್ಮೀರ ಹೊರತುಪಡಿಸಿ ದೇಶದ ಯಾವುದೇ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಿಲ್ಲ. ಇದೀಗ ಕರ್ನಾಟಕ ಪ್ರತ್ಯೇಕ ಧ್ವಜ ಹೊಂದಲು ಮುಂದಾಗಿದೆ.
ಈ ಸಂಬಂಧ ಜೂನ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಿದ್ದು, ಈ ಸಮಿತಿಯಲ್ಲಿ ಹಿರಿಯ ಸಾಹಿತಿಗಳು ಹಾಗೂ ಚಿಂತಕರು ಸದಸ್ಯರಾಗಿರಲಿದ್ದಾರೆ. ಈ ಸಮಿತಿಯು ಅಧ್ಯಯನ ನಡೆಸಿ ಹಾಲಿ ಇರುವ ಧ್ವಜವನ್ನೇ ಅಂಗೀಕರಿಸಬೇಕೆ, ಇಲ್ಲವೇ ಹೊಸದೊಂದು ಧ್ವಜವನ್ನು ಮಾನ್ಯ ಮಾಡಬೇಕೆ ಎಂಬುದರ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ನೀಡಲಿದೆ.
ಸಧ್ಯಕ್ಕೆ ಕರ್ನಾಟಕ ಸರ್ಕಾರ ಹಳದಿ, ಕೆಂಪು ಮಿಶ್ರಿತ ಧ್ವಜವನ್ನು ನಾಡ ಧ್ವಜವನ್ನಾಗಿ ಸ್ವೀಕರಿಸಿದೆ. ಆದರೆ, ಇದಕ್ಕೆ ಯಾವುದೇ ಅಧಿಕೃತವಾದ ಮಾನ್ಯತೆ ಇಲ್ಲ.  ದೇಶದಲ್ಲಿ ಎಲ್ಲಾ ರಾಜ್ಯಗಳು ತ್ರಿವರ್ಣ ಧ್ವಜವನ್ನು ಮಾತ್ರ ಹೊಂದಬೇಕೆಂಬ ನಿಯಮವಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಮಾತ್ರ ಸಂವಿಧಾನದ 370ನೆ ವಿಧಿಯ ಪ್ರಕಾರ ಪ್ರತ್ಯೇಕವಾದ ಧ್ವಜವನ್ನು ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT