ಸಾಂದರ್ಭಿಕ ಚಿತ್ರ 
ರಾಜ್ಯ

ತಡವಾಗಿ ಬಂದ ಆ್ಯಂಬುಲೆನ್ಸ್: ತುಮಕೂರಿನಲ್ಲಿ 8 ವರ್ಷದ ಬಾಲಕ ಸಾವು

ಆ್ಯಂಬುಲೆನ್ಸ್ ಬರುವುದು ತಡವಾದ ಕಾರಣ ಕಾಯಿಲೆಯಿಂದ ಬಳಲುತ್ತಿದ್ದ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಪಾವಗಡದಲ್ಲಿ...

ತುಮಕೂರು: ಆ್ಯಂಬುಲೆನ್ಸ್ ಬರುವುದು ತಡವಾದ ಕಾರಣ ಕಾಯಿಲೆಯಿಂದ ಬಳಲುತ್ತಿದ್ದ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಪಾವಗಡದಲ್ಲಿ ನಡೆದಿದೆ.
8 ವರ್ಷದ ಶ್ರೀನಿಧಿ ಮೃತ ಬಾಲಕ. ವೆಂಕಟಸ್ವಾಮಿ-ಸುಗುಣಮ್ಮ ದಂಪತಿಯ ಮಗನಾದ ಶ್ರೀನಿಧಿ.
ಕಳೆದ ಮೂರ್ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ. ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದ್ದರು. ಈ ವೇಳೆ 108 ಸಿಬ್ಬಂದಿಗೆ ಮೃತ ಶ್ರೀನಿಧಿಯ ಪೋಷಕರು ತುರ್ತಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಮನವಿ ಮಾಡಿದ್ದರು. 
ಬಳಿಕ 2 ಗಂಟೆ ತಡವಾಗಿ ಬಾಲಕನನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಆ ವೇಳೆಗಾಗಲೇ ಬಾಲಕನ ಸ್ಥಿತಿ ತೀರಾ ಹದಗೆಟ್ಟಿದ್ದರಿಂದ ಅಲ್ಲಿಯ ವೈದ್ಯರು ಬಾಲಕನನ್ನು ಕೂಡಲೇ ಬೆಂಗಳೂರಿಗೆ ರವಾನಿಸುವಂತೆ ಹೇಳಿದ್ದರು. ಕೂಡಲೇ ಬಾಲಕನನ್ನ ಕರೆದುಕೊಂಡು ಹೋಗಿದ್ದಾರಾದರೂ ಬೆಂಗಳೂರು ತಲುಪುವ ಮೊದಲೇ ಮಾರ್ಗ ಮಧ್ಯದಲ್ಲಿ ಬಾಲಕ ಶ್ರೀನಿಧಿ ಕೊನೆಯುಸಿರೆಳೆದಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT