ಆಸ್ಕರ್ ಫೆರ್ನಾಂಡಿಸ್ 
ರಾಜ್ಯ

ಕರ್ನಾಟಕ ಧ್ವಜ ವಿವಾದ ಕಾನೂನನ್ನು ಅವಲಂಬಿಸಿದೆ: ಆಸ್ಕರ್ ಫೆರ್ನಾಂಡಿಸ್

ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಬೇಕೆಂದು ಒತ್ತಾಯಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ....

ನವದೆಹಲಿ: ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಬೇಕೆಂದು ಒತ್ತಾಯಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡೀಸ್, ಈ ವಿವಾದ ಕಾನೂನನ್ನು ಅವಲಂಬಿಸಿದೆ ಎಂದು ಹೇಳುತ್ತಾರೆ.
ಜನರು ಸುಮ್ಮನೆ ವಿವಾದವನ್ನು ಎಬ್ಬಿಸುತ್ತಾರೆ. ಅದು ಕಾನೂನುಬದ್ಧವಾಗಿದೆಯೇ ಅಥವಾ ಇಲ್ಲವೇ ಎಂದು ಕೂಡ ಯೋಚಿಸುವುದಿಲ್ಲ. ಅದು ಕಾನೂನುಬದ್ಧವಾಗಿದ್ದರೆ ಪ್ರತಿಭಟನೆ ಮಾಡಬೇಕು. ಇಲ್ಲದಿದ್ದರೆ ಮಾಡಬಾರದು ಎಂದು ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇದಕ್ಕೂ ಮುನ್ನ ಇಂದು ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್ ನವರು ಸಂವಿಧಾನದಲ್ಲಿ ಅಸ್ತಿತ್ವದಲ್ಲಿಲ್ಲದ ಷರತ್ತುಗಳನ್ನು ಉಲ್ಲೇಖಿಸುತ್ತಿದ್ದಾರೆ. ರಾಜ್ಯಕ್ಕೆ ಪ್ರತ್ಯೇಕ ಧ್ವಜ ಯಾವ ರೀತಿಯಿಂದಲೂ ಭಾರತದ ರಾಷ್ಟ್ರೀಯ ಧ್ವಜಕ್ಕೆ ಅವಮಾನ ಮಾಡಿದಂತಾಗುವುದಿಲ್ಲ ಎಂದು ಹೇಳಿದ್ದಾರೆ.
ನಾವು ರಾಷ್ಟ್ರಧ್ವಜಕ್ಕೆ ಎಂದಿನಂತೆಯೇ ಗೌರವ ನೀಡುತ್ತೇವೆ. ದೇಶದ ಸಂವಿಧಾನದಲ್ಲಿ ಯಾವತ್ತಿಗೂ ರಾಜ್ಯಕ್ಕೆ ಪ್ರತ್ಯೇಕ ಧ್ವಜ ಇರಬೇಕು ಅಥವಾ ಇರಬಾರದೆಂದು ಹೇಳಿಲ್ಲ. ಹಾಗಿರುವಾಗ ಬಿಜೆಪಿ ಮತ್ತು ಜೆಡಿಎಸ್ ಅಸ್ಥಿತ್ವದಲ್ಲಿಲ್ಲದ ಷರತ್ತುಗಳನ್ನು ಏಕೆ ಉಲ್ಲೇಖಿಸುತ್ತದೆ? ಜೂನ್ 6ರಂದು ಇದಕ್ಕಾಗಿ ಸಮಿತಿ ರಚಿಸಲು ನಿರ್ಧರಿಸಿದೆವು. ಇದರ ಹಿಂದೆ ರಾಜಕೀಯ ಉದ್ದೇಶವಿಲ್ಲ. ರಾಷ್ಟ್ರಧ್ವಜ ನಮಗೆ ಯಾವತ್ತಿಗೂ ಮೇಲೆಯೇ ಎಂದು ಹೇಳಿದ್ದರು.
ಈ ಮಧ್ಯೆ ರಾಜ್ಯ ಸರ್ಕಾರ 9 ಸದಸ್ಯರ ಸಮಿತಿ ರಚಿಸಿದ್ದು, ರಾಜ್ಯಕ್ಕೆ ಪ್ರತ್ಯೇಕ ಧ್ವಜ ವಿನ್ಯಾಸದ ಸಾಧ್ಯತೆ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ