ಸಾಂದರ್ಭಿಕ ಚಿತ್ರ 
ರಾಜ್ಯ

32 ಕೈದಿಗಳ ಮೇಲೆ ಹಲ್ಲೆ ಆರೋಪ: ಕಾರಾಗೃಹ ಇಲಾಖೆ ಅಧಿಕಾರಿಗಳಿಗೆ ಎನ್ ಎಚ್ ಆರ್ ಸಿ ನೊಟೀಸ್

ಕೇಂದ್ರ ಕಾರಾಗೃಹದಲ್ಲಿನ 32 ಕೈದಿಗಳ ಮೇಲೆ ನಡೆದ ಹಲ್ಲೆಯ ಸಂಬಂದ ನಾಲ್ಕು ವಾರಗಳಲ್ಲಿ ಸಂಪೂರ್ಣ ಮಾಹಿತಿ ನೀಡಬೇಕು ಎಂದು ರಾಷ್ಟ್ರೀಯ ಮಾನವ ...

ಬೆಂಗಳೂರು: ಕೇಂದ್ರ ಕಾರಾಗೃಹದಲ್ಲಿನ 32 ಕೈದಿಗಳ ಮೇಲೆ ನಡೆದ ಹಲ್ಲೆಯ ಸಂಬಂದ ನಾಲ್ಕು ವಾರಗಳಲ್ಲಿ ಸಂಪೂರ್ಣ ಮಾಹಿತಿ ನೀಡಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಬಂಧೀಖಾನೆ ಅಧಿಕಾರಿಗಳಿಗೆ ನೊಟೀಸ್ ನೀಡಿದೆ.
ಡಿಐಜಿ ರೂಪಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ 32 ಮಂದಿ ಕೈದಿಗಳನ್ನು ಸ್ಥಳಾಂತರಿಸುವ ವೇಳೆ ಜೈಲಿನ ಸಿಬಂದಿ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ  ಕಾರಾ ಗೃಹ ಇಲಾಖೆಯ ಪೊಲೀಸ್‌ ಮಹಾನಿರ್ದೇಶಕರಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದು, 4 ವಾರಗಳಲ್ಲಿ ಉತ್ತರಿಸುವಂತೆ ಗಡುವು ನೀಡಿದೆ.
ಅಕ್ರಮದ ಬಗ್ಗೆ ರಾಜ್ಯ ಸರಕಾರ ತನಿಖೆಗೆ ಆದೇಶಿಸುತ್ತಿದ್ದಂತೆ 32 ಮಂದಿ ಕೈದಿಗಳನ್ನು ತಡರಾತ್ರಿ ವೇಳೆ ಮೈಸೂರು, ಬಳ್ಳಾರಿ, ಬೆಳಗಾವಿ ಮತ್ತು ದಾವಣಗೆರೆ ಜಿಲ್ಲಾ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿದೆ. ಈ ವೇಳೆ ಜೈಲಿನ ಸಿಬಂದಿ ಅಮಾನುಷವಾಗಿ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಇದರ ಬಗ್ಗೆ ಆಯೋಗಕ್ಕೆ ಮಾಹಿತಿಯಿದ್ದು, ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು  ಸಂಸದೆ ಶೋಭಾ ಕರಂದ್ಲಾಜೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರು.
ಸರ್ಕಾರ ನೇಮಿಸಿರುವ ತನಿಖಾ ಸಮಿತಿ ಜೈಲಿಗೆ ಭೇಟಿ ನೀಡುವ ಮುನ್ನವೇ ಕೈದಿಗಳನ್ನು ಸ್ಥಳಾಂತರಿಸಿ ಹಲ್ಲೆ ನಡೆಸಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಹಲ್ಲೆಗೊಳಗಾದ ಕೈದಿಗಳನ್ನು ಭೇಟಿ ಮಾಡಲು ಕುಟುಂಬಸ್ಥರಿಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT