ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ವೃತ್ತಪತ್ರಿಕೆಗಳಲ್ಲಿ ಆಹಾರ ಪ್ಯಾಕ್ ಮಾಡುವುದು ನಿಷೇಧ

ಆಹಾರಗಳನ್ನು ವೃತ್ತ ಪತ್ರಿಕೆಗಳಲ್ಲಿ ಪ್ಯಾಕ್ ಮಾಡುವುದನ್ನು ನಿಷೇಧಿಸಿ ಆಹಾರ ಸುರಕ್ಷತಾ ಆಯೋಗ ಆದೇಶ ಹೊರಡಿಸಿದೆ....

ಬೆಂಗಳೂರು:  ಆಹಾರಗಳನ್ನು ವೃತ್ತ ಪತ್ರಿಕೆಗಳಲ್ಲಿ ಪ್ಯಾಕ್ ಮಾಡುವುದನ್ನು ನಿಷೇಧಿಸಿ ಆಹಾರ ಸುರಕ್ಷತಾ ಆಯೋಗ ಆದೇಶ ಹೊರಡಿಸಿದೆ.
ರಾಜ್ಯದ 8 ಜಿಲ್ಲೆಗಳಲ್ಲಿ ಆಹಾರ ಪ್ಯಾಕ್ ಮಾಡಲು ವೃತ್ತ ಪತ್ರಿಕೆ ಬಳಕೆ ಮಾಡುವುದನ್ನು ನಿಷೇದಿಸಿ ಆದೇಶ ಹೊರಡಿಸಲಾಗಿದೆ. ವೃತ್ತ ಪತ್ರಿಕೆಗೆ ಬಳಸುವ ಇಂಕ್ ಆಹಾರದ ಜೊತೆ ನೇರ ಸಂಪರ್ಕ ಹೊಂದುವ ಕಾರಣ ಕ್ಯಾನ್ಸರ್ ಉಂಟಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಬೃಬತ್ ಬೆಂಗಳೂರು ಮಹಾನಗರ ಪಾಲಿಕೆ, ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಹಾಗೂ ತುಮಕೂರು ನಗರ ಕಾರ್ಪೋರೇಷನ್ ಗಳ ವ್ಯಾಪ್ತಿಯಲ್ಲಿ ಯಾವುದೇ ಆಹಾರ ಪ್ಯಾಕ್ ಮಾಡಲು ಪ್ರಿಂಟ್ ಮಾಡಿದಂತ ಪೇಪರ್ ಗಳನ್ನು 1 ವರ್ಷದ ಕಾಲ ಬಳಸುವಂತಿಲ್ಲ ಎಂದು ಆಹಾರ ಸುರಕ್ಷತಾ ಆಯೋಗ ಸೂಚಿಸಿದೆ.
ಪೇಪರ್ ಗಳಲ್ಲಿನ ಶಾಹಿ ಆಹಾರ ಪದಾರ್ಥಗಳ ಜೊತೆ ಸೇರಿ ವಿಷಪೂರಿತವಾಗುವ ಸಾಧ್ಯತೆಯಿದೆ. ಹೀಗಾಗಿ ಇಂಥ ಆಹಾರ ಸೇವಿಸುವುದು ಅಸುರಕ್ಷಿತವಾಗಿರುತ್ತದೆ ಎಂದು ಹೇಳಿದೆ. ಗ್ರಾಹಕರು ಈ ಆಹಾರ ಸೇವಿಸುವುದರಿಂದ ಫುಡ್ ಪಾಯ್ಸನ್ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಮೊದಲ ಹಂತವಾಗಿ 8 ಜಿಲ್ಲೆಗಳಲ್ಲಿ ವೃತ್ತ ಪತ್ರಿಕೆ ನಿಷೇಧ ಮಾಡಲಾಗಿದ್ದು, ಹಂತಹಂತವಾಗಿ ರಾಜ್ಯಾದ್ಯಂತ ನಿಷೇಧಿಸಲಾಗಿಸುವುದು ಎಂದು ಆಹಾರ ಮತ್ತು ಸುರಕ್ಷತಾ ಆಯೋಗದ ಆಯುಕ್ತ ಸುಬೋದ್ ಯಾದವ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT