ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಐಎಎಸ್ ಅಧಿಕಾರಿ ಮನೆಯಿಂದ ನಗದು, ಚಿನ್ನ ದರೋಡೆ

ಹಿರಿಯ ಐಎಎಸ್ ಅಧಿಕಾರಿ ಸುಬೋಧ್ ಯಾದವ್ ಅವರ ಸಂಜಯ್ ನಗರ ನಿವಾಸದ ಬಾಗಿಲು....

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಸುಬೋಧ್ ಯಾದವ್ ಅವರ ಸಂಜಯ್ ನಗರ ನಿವಾಸದ ಬಾಗಿಲು ಮುರಿದು ಒಳನುಗ್ಗಿದ ದರೋಡೆಕೋರರು ಅಪಾರ ಪ್ರಮಾಣದ ಚಿನ್ನ ಮತ್ತು ನಗದು ಕದ್ದು ಪರಾರಿಯಾದ ಘಟನೆ ಮೊನ್ನೆ ಭಾನುವಾರ ರಾತ್ರಿ ನಡೆದಿದೆ
ಅಧಿಕಾರಿಯ ಕಾರು ಚಾಲಕ ಮನೆಗೆ ಬಂದು ನೋಡಿದಾಗ ಮುಂಭಾಗಿಲು ಒಡೆದಿದ್ದು ಕಂಡುಬಂತು. ತಕ್ಷಣವೇ ಪೊಲೀಸರಿಗೆ ವಿಷಯ ತಿಳಿಸಿದರು.
ಕಳೆದ ಭಾನುವಾರ ಬೆಳಗ್ಗೆ ಯಾದವ್ ಮತ್ತು ಅವರ ಕುಟುಂಬ ಚೆನ್ನೈಗೆ ಹೋಗಿದ್ದರು. ಅದೇ ದಿನ ರಾತ್ರಿ ಈ ಘಟನೆ ನಡೆದಿದೆ. ದರೋಡೆಕೋರರು ಚಿನ್ನ ಮತ್ತು 12,000 ರೂ.ನಗದು ಕದ್ದು ಪರಾರಿಯಾಗಿದ್ದಾರೆ. 
ಕಳೆದ ನಾಲ್ಕು ವರ್ಷಗಳಿಂದ ಯಾದವ್ ಕುಟುಂಬ ಆ ಮನೆಯಲ್ಲಿ ವಾಸವಾಗಿತ್ತು. ನಗದು ಮತ್ತು ಚಿನ್ನಾಭರಣ ಕಳವಾಗಿದೆ ಎಂದು ಪೊಲೀಸರಿಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಮನೆಯಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿಲ್ಲ. ಹಾಗಾಗಿ ದರೋಡೆಕೋರರನ್ನು ಹಿಡಿಯಲು ಸ್ವಲ್ಪ ಕಷ್ಟವಾಗುತ್ತಿದೆ. ಯಾದವ್ ಕುಟುಂಬದವರಿಗೆ ಪರಿಚಯವಿರುವವರೇ ಈ ದುಷ್ಕೃತ್ಯ ನಡೆಸಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT